<p><strong>ಮೈಸೂರು: </strong>ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಎಲೆಮರೆ ಕಾಯಿಗಳಂತಿದ್ದ, ‘ಪ್ರಜಾವಾಣಿ’ ಗುರುತಿಸಿದ ಯುವ ಸಾಧಕರ ಬೆನ್ನು ತಟ್ಟಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್, ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಪ್ರೋತ್ಸಾಹದ ಮಾತುಗಳನ್ನು ಹೇಳಿದರು.</p>.<p>ಮಾನಸ ಗಂಗೋತ್ರಿ ಆವರಣದ ಸೆನೆಟ್ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ 16 ಯುವ ಸಾಧಕರಿಗೆ ಪ್ರಮಾಣ ಪತ್ರ ವಿತರಿಸಿದ ಕುಲಪತಿ, ಪ್ರತಿಯೊಬ್ಬರ ಸಾಧನೆಗೂ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಯುವ ಸಾಧಕರ ಆಯ್ಕೆ ಸಮಿತಿಯ ತೀರ್ಪುಗಾರರಲ್ಲೊಬ್ಬರಾಗಿದ್ದ ಪ್ರೊ.ಎನ್.ಉಷಾರಾಣಿ, ಕೆಲವು ಸಾಧಕರ ಸಾಧನೆಯನ್ನು ವೇದಿಕೆಯಲ್ಲೇ ಸಂಕ್ಷಿಪ್ತವಾಗಿ ಕುಲಪತಿಗೆ ವಿವರಿಸಿದರು. ವೈಯಕ್ತಿಕವಾಗಿ ಪರಿಚಯಿಸಿದರು. ಇದರಿಂದ ಮತ್ತಷ್ಟು ಕುಲಪತಿ ಮತ್ತಷ್ಟು ಸ್ಫೂರ್ತಿಗೊಂಡರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ ಸಾಥ್ ನೀಡಿದರು.</p>.<p><strong>ಸ್ನೇಹಿತರ ಸಾಥ್: </strong>ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ‘ಪ್ರಜಾವಾಣಿ’ 20 ಯುವ ಸಾಧಕರನ್ನು ಗುರುತಿಸಿತ್ತು. ಇವರ ಬಗ್ಗೆ ಎರಡು ಪುಟ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಸೋಮವಾರ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಸಂಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ, ಪ್ರೊ.ಎನ್.ಉಷಾರಾಣಿ ನೇತೃತ್ವದ ಆಯ್ಕೆ ಸಮಿತಿ 20 ಯುವ ಸಾಧಕರನ್ನು ಆಯ್ಕೆ ಮಾಡಿತ್ತು.</p>.<p>ಯುವ ಸಾಧಕರಿಗೆ ಅಭಿನಂದನೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳಲು ಗೆಳೆಯರು, ಒಡನಾಡಿಗಳು, ಕುಟುಂಬ ವರ್ಗದವರು ಸಹ ನಿಗದಿತ ಸಮಯಕ್ಕೆ ಬಂದಿದ್ದರು. ವೇದಿಕೆಯಲ್ಲಿ ಅಭಿನಂದಿಸುವುದನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿಯುವ ಜತೆಯಲ್ಲೇ, ಕ್ಷಣಾರ್ಧದಲ್ಲೇ ಸಭಾಂಗಣದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಸಂಭ್ರಮವನ್ನು ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಎಲೆಮರೆ ಕಾಯಿಗಳಂತಿದ್ದ, ‘ಪ್ರಜಾವಾಣಿ’ ಗುರುತಿಸಿದ ಯುವ ಸಾಧಕರ ಬೆನ್ನು ತಟ್ಟಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್, ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಪ್ರೋತ್ಸಾಹದ ಮಾತುಗಳನ್ನು ಹೇಳಿದರು.</p>.<p>ಮಾನಸ ಗಂಗೋತ್ರಿ ಆವರಣದ ಸೆನೆಟ್ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ 16 ಯುವ ಸಾಧಕರಿಗೆ ಪ್ರಮಾಣ ಪತ್ರ ವಿತರಿಸಿದ ಕುಲಪತಿ, ಪ್ರತಿಯೊಬ್ಬರ ಸಾಧನೆಗೂ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಯುವ ಸಾಧಕರ ಆಯ್ಕೆ ಸಮಿತಿಯ ತೀರ್ಪುಗಾರರಲ್ಲೊಬ್ಬರಾಗಿದ್ದ ಪ್ರೊ.ಎನ್.ಉಷಾರಾಣಿ, ಕೆಲವು ಸಾಧಕರ ಸಾಧನೆಯನ್ನು ವೇದಿಕೆಯಲ್ಲೇ ಸಂಕ್ಷಿಪ್ತವಾಗಿ ಕುಲಪತಿಗೆ ವಿವರಿಸಿದರು. ವೈಯಕ್ತಿಕವಾಗಿ ಪರಿಚಯಿಸಿದರು. ಇದರಿಂದ ಮತ್ತಷ್ಟು ಕುಲಪತಿ ಮತ್ತಷ್ಟು ಸ್ಫೂರ್ತಿಗೊಂಡರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ ಸಾಥ್ ನೀಡಿದರು.</p>.<p><strong>ಸ್ನೇಹಿತರ ಸಾಥ್: </strong>ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆ ವ್ಯಾಪ್ತಿಯಲ್ಲಿ ‘ಪ್ರಜಾವಾಣಿ’ 20 ಯುವ ಸಾಧಕರನ್ನು ಗುರುತಿಸಿತ್ತು. ಇವರ ಬಗ್ಗೆ ಎರಡು ಪುಟ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಸೋಮವಾರ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಸಂಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ, ಪ್ರೊ.ಎನ್.ಉಷಾರಾಣಿ ನೇತೃತ್ವದ ಆಯ್ಕೆ ಸಮಿತಿ 20 ಯುವ ಸಾಧಕರನ್ನು ಆಯ್ಕೆ ಮಾಡಿತ್ತು.</p>.<p>ಯುವ ಸಾಧಕರಿಗೆ ಅಭಿನಂದನೆ ಸಲ್ಲಿಸುವುದನ್ನು ಕಣ್ತುಂಬಿಕೊಳ್ಳಲು ಗೆಳೆಯರು, ಒಡನಾಡಿಗಳು, ಕುಟುಂಬ ವರ್ಗದವರು ಸಹ ನಿಗದಿತ ಸಮಯಕ್ಕೆ ಬಂದಿದ್ದರು. ವೇದಿಕೆಯಲ್ಲಿ ಅಭಿನಂದಿಸುವುದನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿಯುವ ಜತೆಯಲ್ಲೇ, ಕ್ಷಣಾರ್ಧದಲ್ಲೇ ಸಭಾಂಗಣದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಸಂಭ್ರಮವನ್ನು ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>