<p><strong>ಮೈಸೂರು</strong>: ಯುವ ಮನಸ್ಸುಗಳ ಚಿತ್ತಾರ, ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರ ಸಜ್ಜಾಗಿದೆ.</p>.<p>ಸೆ. 10ರಿಂದ 17ರವರೆಗೆ ಇಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ದಿನ ಸಂಜೆ 5ರಿಂದ 10ರವರೆಗೂ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಪ್ರದರ್ಶನದ ಮೂಲಕ ರಂಜಿಸಲಿದ್ದಾರೆ. ಅದಕ್ಕೆಂದೇ ವಿಶೇಷವಾಗಿ ವೇದಿಕೆಯನ್ನು ಸಿಂಗರಿಸಿದ್ದು, ಈ ಮಾರ್ಗಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರವನ್ನೂ ಮಾಡಲಾಗಿದೆ.</p>.<p>300ಕ್ಕೂ ಹೆಚ್ಚು ಕಲಾ ತಂಡಗಳು ಈ ಬಾರಿ ಪ್ರದರ್ಶನ ನೀಡುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಈಗಾಗಲೇ ಅಂತಿಮ ಸಿದ್ಧತೆ ನಡೆಸಿದ್ದಾರೆ. ಪ್ರತಿ ದಿನವೂ 60 ತಂಡಗಳಿಂದ ಪ್ರದರ್ಶನ ಇರಲಿದೆ. ಬುಧವಾರ ಸಂಜೆ 4ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಯುವ ರಾಜಕುಮಾರ್ ಹಾಗೂ ಅಮೃತಾ ಅಯ್ಯಂಗಾರ್ ಭಾಗಿ ಆಗಲಿದ್ದಾರೆ.</p>.<p>ಮೊದಲ ದಿನದಂದು ಉದ್ಘಾಟನಾ ಕಾರ್ಯಕ್ರಮದ ತರುವಾಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ತಂಡದಿಂದ ‘ಸ್ವರ ಭಾರತಿ’ಯೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಬುಧವಾರ 25 ತಂಡಗಳು ಪ್ರದರ್ಶನ ನೀಡಲಿವೆ.</p>.<p><strong>ಪೂರ್ಣ ಹಾಡು ಬಿಡುಗಡೆ</strong>: ‘ಯುವ ಸಂಭ್ರಮ’ಕ್ಕೆ ಸ್ಪೂರ್ತಿ ತುಂಬಲು ಸಿದ್ಧಪಡಿಸಿರುವ ವಿಶೇಷ ಥೀಮ್ ಗೀತೆಯ ಬಿಡುಗಡೆ ಕಾರ್ಯಕ್ರಮವು ಸೋಮವಾರ ಸಂಜೆ ಬಿಎಂಎಚ್ ಮಾಲ್ ಆವರಣದಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಯುವ ಮನಸ್ಸುಗಳ ಚಿತ್ತಾರ, ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರ ಸಜ್ಜಾಗಿದೆ.</p>.<p>ಸೆ. 10ರಿಂದ 17ರವರೆಗೆ ಇಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ದಿನ ಸಂಜೆ 5ರಿಂದ 10ರವರೆಗೂ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಪ್ರದರ್ಶನದ ಮೂಲಕ ರಂಜಿಸಲಿದ್ದಾರೆ. ಅದಕ್ಕೆಂದೇ ವಿಶೇಷವಾಗಿ ವೇದಿಕೆಯನ್ನು ಸಿಂಗರಿಸಿದ್ದು, ಈ ಮಾರ್ಗಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರವನ್ನೂ ಮಾಡಲಾಗಿದೆ.</p>.<p>300ಕ್ಕೂ ಹೆಚ್ಚು ಕಲಾ ತಂಡಗಳು ಈ ಬಾರಿ ಪ್ರದರ್ಶನ ನೀಡುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಈಗಾಗಲೇ ಅಂತಿಮ ಸಿದ್ಧತೆ ನಡೆಸಿದ್ದಾರೆ. ಪ್ರತಿ ದಿನವೂ 60 ತಂಡಗಳಿಂದ ಪ್ರದರ್ಶನ ಇರಲಿದೆ. ಬುಧವಾರ ಸಂಜೆ 4ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಯುವ ರಾಜಕುಮಾರ್ ಹಾಗೂ ಅಮೃತಾ ಅಯ್ಯಂಗಾರ್ ಭಾಗಿ ಆಗಲಿದ್ದಾರೆ.</p>.<p>ಮೊದಲ ದಿನದಂದು ಉದ್ಘಾಟನಾ ಕಾರ್ಯಕ್ರಮದ ತರುವಾಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ತಂಡದಿಂದ ‘ಸ್ವರ ಭಾರತಿ’ಯೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ. ಬುಧವಾರ 25 ತಂಡಗಳು ಪ್ರದರ್ಶನ ನೀಡಲಿವೆ.</p>.<p><strong>ಪೂರ್ಣ ಹಾಡು ಬಿಡುಗಡೆ</strong>: ‘ಯುವ ಸಂಭ್ರಮ’ಕ್ಕೆ ಸ್ಪೂರ್ತಿ ತುಂಬಲು ಸಿದ್ಧಪಡಿಸಿರುವ ವಿಶೇಷ ಥೀಮ್ ಗೀತೆಯ ಬಿಡುಗಡೆ ಕಾರ್ಯಕ್ರಮವು ಸೋಮವಾರ ಸಂಜೆ ಬಿಎಂಎಚ್ ಮಾಲ್ ಆವರಣದಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>