<p><strong>ಮೈಸೂರು</strong>: ‘ವಿದ್ಯಾರ್ಥಿನಿಯರು ಹತ್ತಾರು ಅಡೆತಡೆಗಳನ್ನು ಲೆಕ್ಕಿಸದೇ ಗುರಿಯೊಂದಿಗೆ ಮುನ್ನಡೆದರೆ ಖಂಡಿತ ಯಶಸ್ಸು ಸಿಗಲಿದೆ’ ಎಂದು ಚಿತ್ರನಟ ಝೈದ್ ಖಾನ್ ಹೇಳಿದರು.</p>.<p>ಮಹಾರಾಣಿ ಮಹಿಳಾ ಕಲಾ ಕಾಲೇಜಿನ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಮಂಗಳವಾರ ಕಾಲೇಜಿನ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್, ಎನ್.ಸಿ.ಸಿ ರೇಂಜರ್ಸ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾರಿಯರಿಂದ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಹೆಣ್ಣು ಮಕ್ಕಳು ಸಾಧನೆ ಹಾದಿಯಲ್ಲಿ ಸಾಗಬೇಕು. ಯಾರಿಗೂ ಹೆದರದೇ, ಗುರಿಗಳನ್ನಿಟ್ಟುಕೊಂಡು ಮುನ್ನುಗ್ಗಬೇಕು. ಅಸಾಧ್ಯವಾಗಿರುವುದು ಬದುಕಿನಲ್ಲಿ ಯಾವುದೂ ಇಲ್ಲ’ ಎಂದು ವಿದ್ಯಾರ್ಥಿನಿಯರನ್ನು ಹುರಿದುಂಬಿಸಿದರು.</p>.<p>ಇದೇ ವೇಳೆ ತಮ್ಮ ಸಿನಿಮಾ ಡೈಲಾಗ್ ಹೇಳಿ ಝೈದ್ ಖಾನ್ ಎಲ್ಲರನ್ನು ರಂಜಿಸಿದರು. ‘ಬನಾರಸ್’ ಚಿತ್ರದ ಹಾಡಿಗೆ ಹೆಜ್ಜೆ ಹಾಕಿ ವಿದ್ಯಾರ್ಥಿನಿಯರ ಮನಸೂರೆಗೊಳಿಸಿದರು.</p>.<p>ಬಳಿಕ ಗಾಯಕ ಅಕ್ಷಯ್ ಅವರು ತಮ್ಮ ಸಂಯೋಜನೆಯ ಹಾಡುಗಳನ್ನು ಹಾಡಿದರು.</p>.<p>ನಟ ನಿರಂಜನ್, ಮೈಸೂರು ವಿ.ವಿ. ಸಿಂಡಿಕೇಟ್ ಸದಸ್ಯ ಬಸವರಾಜು, ಕಾಲೇಜು ಪ್ರಾಂಶುಪಾಲರಾದ ಪ್ರೊ. ಎಂ.ಎಸ್ ಅನಿತಾ, ಐಕ್ಯೂಎಸಿ ಸಂಚಾಲಕಿ ಪ್ರಿಯಾ ಉತ್ತಯ್ಯ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಕೆ.ಎಸ್ ಭಾಸ್ಕರ್, ಖಜಾಂಚಿ ಟಿ.ನಾಗವೇಣಿ, ಪತ್ರಾಂಕಿತ ವ್ಯವಸ್ಥಾಪಕ ಕೆ.ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿದ್ಯಾರ್ಥಿನಿಯರು ಹತ್ತಾರು ಅಡೆತಡೆಗಳನ್ನು ಲೆಕ್ಕಿಸದೇ ಗುರಿಯೊಂದಿಗೆ ಮುನ್ನಡೆದರೆ ಖಂಡಿತ ಯಶಸ್ಸು ಸಿಗಲಿದೆ’ ಎಂದು ಚಿತ್ರನಟ ಝೈದ್ ಖಾನ್ ಹೇಳಿದರು.</p>.<p>ಮಹಾರಾಣಿ ಮಹಿಳಾ ಕಲಾ ಕಾಲೇಜಿನ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಮಂಗಳವಾರ ಕಾಲೇಜಿನ ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್, ಎನ್.ಸಿ.ಸಿ ರೇಂಜರ್ಸ್ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾರಿಯರಿಂದ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಹೆಣ್ಣು ಮಕ್ಕಳು ಸಾಧನೆ ಹಾದಿಯಲ್ಲಿ ಸಾಗಬೇಕು. ಯಾರಿಗೂ ಹೆದರದೇ, ಗುರಿಗಳನ್ನಿಟ್ಟುಕೊಂಡು ಮುನ್ನುಗ್ಗಬೇಕು. ಅಸಾಧ್ಯವಾಗಿರುವುದು ಬದುಕಿನಲ್ಲಿ ಯಾವುದೂ ಇಲ್ಲ’ ಎಂದು ವಿದ್ಯಾರ್ಥಿನಿಯರನ್ನು ಹುರಿದುಂಬಿಸಿದರು.</p>.<p>ಇದೇ ವೇಳೆ ತಮ್ಮ ಸಿನಿಮಾ ಡೈಲಾಗ್ ಹೇಳಿ ಝೈದ್ ಖಾನ್ ಎಲ್ಲರನ್ನು ರಂಜಿಸಿದರು. ‘ಬನಾರಸ್’ ಚಿತ್ರದ ಹಾಡಿಗೆ ಹೆಜ್ಜೆ ಹಾಕಿ ವಿದ್ಯಾರ್ಥಿನಿಯರ ಮನಸೂರೆಗೊಳಿಸಿದರು.</p>.<p>ಬಳಿಕ ಗಾಯಕ ಅಕ್ಷಯ್ ಅವರು ತಮ್ಮ ಸಂಯೋಜನೆಯ ಹಾಡುಗಳನ್ನು ಹಾಡಿದರು.</p>.<p>ನಟ ನಿರಂಜನ್, ಮೈಸೂರು ವಿ.ವಿ. ಸಿಂಡಿಕೇಟ್ ಸದಸ್ಯ ಬಸವರಾಜು, ಕಾಲೇಜು ಪ್ರಾಂಶುಪಾಲರಾದ ಪ್ರೊ. ಎಂ.ಎಸ್ ಅನಿತಾ, ಐಕ್ಯೂಎಸಿ ಸಂಚಾಲಕಿ ಪ್ರಿಯಾ ಉತ್ತಯ್ಯ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಕೆ.ಎಸ್ ಭಾಸ್ಕರ್, ಖಜಾಂಚಿ ಟಿ.ನಾಗವೇಣಿ, ಪತ್ರಾಂಕಿತ ವ್ಯವಸ್ಥಾಪಕ ಕೆ.ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>