<p>ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಅಳುತ್ತಾ ನಿಂತಿದ್ದ 10 ವರ್ಷದ ಬಾಲಕಿಯನ್ನು ಮಕ್ಕಳ ಸಹಾಯವಾಣಿ ಸಂಸ್ಥೆಯವರು ಸೋಮವಾರ ರಕ್ಷಿಸಿದ್ದಾರೆ.<br /> <br /> ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಯಮುನಾ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿನಲ್ಲಿ ಅನಾಥವಾಗಿ ನಿಂತಿದ್ದಳು. ಇದನ್ನು ಗಮನಿಸಿದ ಮಕ್ಕಳ ಸಹಾಯವಾಣಿ ಸಂಸ್ಥೆಯ ದಾಕ್ಷಾಯಣಿ ಕೂಡಲೇ ಆ ಬಾಲಕಿಯನ್ನು ಸಮಾಧಾನ ಮಾಡಿ ಮಕ್ಕಳ ಸಹಾಯವಾಣಿ ಸಂಸ್ಥೆಗೆ<br /> ಕರೆದೊಯ್ದರು.<br /> <br /> <strong>ಬಾಲಕಿಯನ್ನು ಕೌನ್ಸೆಲಿಂಗ್</strong><br /> ಮಾಡಲಾಗಿ ‘ನನ್ನ ತಾಯಿ ಬಳ್ಳಾರಿಗೆ ಕರೆದೊಯ್ದು ಬಿಟ್ಟಳು. ಅಲ್ಲಿಂದ ರೈಲು ಹತ್ತಿ ಮೈಸೂರಿಗೆ ಬಂದೆ. ಹೊಟ್ಟೆ ಹಸಿವು ತಾಳಲಾರದೆ ನಗರದಲ್ಲಿ ಸುತ್ತುತ್ತಿದ್ದೆ’ ಎಂಬುದಾಗಿ ಬಾಲಕಿ ತಿಳಿಸಿದ್ದಾಳೆ ಎಂದು ಮಕ್ಕಳ ಸಹಾಯವಾಣಿ ಸಂಸ್ಥೆಯ ಸಮನ್ವಯಾಧಿಕಾರಿ ಅನಿಲ್ಕುಮಾರ್ ತಿಳಿಸಿದರು.<br /> <br /> ‘ಬಾಲಕಿಯನ್ನು ಸಂಸ್ಥೆಯ ತಾತ್ಕಾಲಿಕ ಮಕ್ಕಳ ತಂಗುದಾಣದಲ್ಲಿ ಇರಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಮಂಗಳವಾರ ಮುಂದೆ ಹಾಜರುಪಡಿಸಲಾಗುವುದು. ನಂತರ ಆಕೆಯ ಪೋಷಕರನ್ನು ಕರೆಸುವ ವ್ಯವಸ್ಥೆ ಮಾಡಲಾಗುವುದು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಅಳುತ್ತಾ ನಿಂತಿದ್ದ 10 ವರ್ಷದ ಬಾಲಕಿಯನ್ನು ಮಕ್ಕಳ ಸಹಾಯವಾಣಿ ಸಂಸ್ಥೆಯವರು ಸೋಮವಾರ ರಕ್ಷಿಸಿದ್ದಾರೆ.<br /> <br /> ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಯಮುನಾ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿನಲ್ಲಿ ಅನಾಥವಾಗಿ ನಿಂತಿದ್ದಳು. ಇದನ್ನು ಗಮನಿಸಿದ ಮಕ್ಕಳ ಸಹಾಯವಾಣಿ ಸಂಸ್ಥೆಯ ದಾಕ್ಷಾಯಣಿ ಕೂಡಲೇ ಆ ಬಾಲಕಿಯನ್ನು ಸಮಾಧಾನ ಮಾಡಿ ಮಕ್ಕಳ ಸಹಾಯವಾಣಿ ಸಂಸ್ಥೆಗೆ<br /> ಕರೆದೊಯ್ದರು.<br /> <br /> <strong>ಬಾಲಕಿಯನ್ನು ಕೌನ್ಸೆಲಿಂಗ್</strong><br /> ಮಾಡಲಾಗಿ ‘ನನ್ನ ತಾಯಿ ಬಳ್ಳಾರಿಗೆ ಕರೆದೊಯ್ದು ಬಿಟ್ಟಳು. ಅಲ್ಲಿಂದ ರೈಲು ಹತ್ತಿ ಮೈಸೂರಿಗೆ ಬಂದೆ. ಹೊಟ್ಟೆ ಹಸಿವು ತಾಳಲಾರದೆ ನಗರದಲ್ಲಿ ಸುತ್ತುತ್ತಿದ್ದೆ’ ಎಂಬುದಾಗಿ ಬಾಲಕಿ ತಿಳಿಸಿದ್ದಾಳೆ ಎಂದು ಮಕ್ಕಳ ಸಹಾಯವಾಣಿ ಸಂಸ್ಥೆಯ ಸಮನ್ವಯಾಧಿಕಾರಿ ಅನಿಲ್ಕುಮಾರ್ ತಿಳಿಸಿದರು.<br /> <br /> ‘ಬಾಲಕಿಯನ್ನು ಸಂಸ್ಥೆಯ ತಾತ್ಕಾಲಿಕ ಮಕ್ಕಳ ತಂಗುದಾಣದಲ್ಲಿ ಇರಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಮಂಗಳವಾರ ಮುಂದೆ ಹಾಜರುಪಡಿಸಲಾಗುವುದು. ನಂತರ ಆಕೆಯ ಪೋಷಕರನ್ನು ಕರೆಸುವ ವ್ಯವಸ್ಥೆ ಮಾಡಲಾಗುವುದು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>