<p><strong>ಮೈಸೂರು: </strong>`ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸುಧಾರಿಸಿದೆ~ ಎಂದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ನಿರ್ದೇಶಕ ಎಸ್.ಸೆಲ್ವಕುಮಾರ್ ಇಲ್ಲಿ ತಿಳಿಸಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ `ಆರೋಗ್ಯ ಶ್ರೇಣಿ~ ಶುಲ್ಕ ರಹಿತ ದೂರವಾಣಿ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. `ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡುವ ಸಲುವಾಗಿ 2005 ರಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಆರಂಭಿಸಲಾಯಿತು. <br /> <br /> ಸಮುದಾಯ ಬೇಡಿಕೆ ಇದ್ದಲ್ಲಿ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು. ಆರೋಗ್ಯ ವ್ಯವಸ್ಥೆಯಲ್ಲಿ ಸಮುದಾಯ ಭಾಗವಹಿಸುವಿಕೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಸಮುದಾಯಾಧಾರಿತ ಕ್ರಿಯಾ ಸಮೀಕ್ಷೆ ಯೋಜನೆಯನ್ನು ಇದೀಗ ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಜಾರಿ ಮಾಡಲಾಗುತ್ತಿದೆ~ ಎಂದು ಹೇಳಿದರು.<br /> <br /> `ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವ ಸೇವಾ ಸೌಲಭ್ಯಗಳು, ಕೊರತೆಗಳು, ಸಮಸ್ಯೆಗಳ ಬಗ್ಗೆ ಅನಿಸಿಕೆಗಳನ್ನು ಆರೋಗ್ಯ ಶ್ರೇಣಿ ದೂರವಾಣಿ ಕರೆ ವ್ಯವಸ್ಥೆ ಮೂಲಕ ದಾಖಲಿಸಬಹುದಾಗಿದೆ. ಪ್ರಶ್ನೆಗಳಿಗೆ ನೀಡಿದ ಉತ್ತರಗಳು ಗಣಕೀಕೃತವಾಗಿ ಒಂದು ದತ್ತಾಂಶದಲ್ಲಿ ಸಂಗ್ರಹವಾಗುತ್ತದೆ. <br /> <br /> ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದು ಯಶಸ್ವಿಯಾದಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ಗ್ರಾಮ ನೈರ್ಮಲ್ಯ ಕೇಂದ್ರಗಳು ಮತ್ತುವೈದ್ಯಾಧಿಕಾರಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಹೇಳಿದರು.<br /> <br /> ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥಾಪಕ ಅಧ್ಯಕ್ಷ ಡಾ.ಆರ್.ಬಾಲಸುಬ್ರಹ್ಮಣ್ಯಂ ಮಾತನಾಡಿ, `ಜಿಲ್ಲೆಯ 137 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಪ್ರಾಯೋಗಿಕವಾಗಿ ಮಾಡಲಾಗುತ್ತಿದೆ. <br /> <br /> ಶುಲ್ಕ ರಹಿತ ದೂರವಾಣಿ ಕರೆ ವ್ಯವಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮಾತ್ರ ಕರೆ ಮಾಡಿ ಕೇಂದ್ರಗಳ ಸಮಸ್ಯೆಗಳು, ಅಗತ್ಯದ ಬಗ್ಗೆ ದಾಖಲಿಸಬಹುದು~ ಎಂದು ಹೇಳಿದರು.<br /> <br /> `ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಸಂಗ್ರಹಿತವಾದ ಮಾಹಿತಿಯಿಂದ ಆರೋಗ್ಯ ಕೇಂದ್ರಗಳ ಶ್ರೇಣಿ ಪಟ್ಟಿಯನ್ನು ತಯಾರಿಸಿ ಅದನ್ನು ಸಮುದಾಯ, ಜನಪ್ರತಿನಿಧಿಗಳು ಮತ್ತು ಇಲಾಖೆ ಸಿಬ್ಬಂದಿಗಳಿಗೆ ತಿಳಿಸಲಾಗುತ್ತದೆ. <br /> <br /> ಇದರಿಂದ ಸಮುದಾಯದ ಪ್ರತಿನಿಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ~ ಎಂದು ತಿಳಿಸಿದರು. <br /> <br /> ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಂ.ಮಾಲೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವೇಕಾನಂದ ಯೂತ್ ಮೂವ್ಮೆಂಟ್ನ ಬಸವರಾಜು ಪ್ರಾಸ್ತಾವಿಕ ಭಾಷಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>`ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸುಧಾರಿಸಿದೆ~ ಎಂದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ನಿರ್ದೇಶಕ ಎಸ್.ಸೆಲ್ವಕುಮಾರ್ ಇಲ್ಲಿ ತಿಳಿಸಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ `ಆರೋಗ್ಯ ಶ್ರೇಣಿ~ ಶುಲ್ಕ ರಹಿತ ದೂರವಾಣಿ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. `ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡುವ ಸಲುವಾಗಿ 2005 ರಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಆರಂಭಿಸಲಾಯಿತು. <br /> <br /> ಸಮುದಾಯ ಬೇಡಿಕೆ ಇದ್ದಲ್ಲಿ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು. ಆರೋಗ್ಯ ವ್ಯವಸ್ಥೆಯಲ್ಲಿ ಸಮುದಾಯ ಭಾಗವಹಿಸುವಿಕೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಸಮುದಾಯಾಧಾರಿತ ಕ್ರಿಯಾ ಸಮೀಕ್ಷೆ ಯೋಜನೆಯನ್ನು ಇದೀಗ ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಜಾರಿ ಮಾಡಲಾಗುತ್ತಿದೆ~ ಎಂದು ಹೇಳಿದರು.<br /> <br /> `ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವ ಸೇವಾ ಸೌಲಭ್ಯಗಳು, ಕೊರತೆಗಳು, ಸಮಸ್ಯೆಗಳ ಬಗ್ಗೆ ಅನಿಸಿಕೆಗಳನ್ನು ಆರೋಗ್ಯ ಶ್ರೇಣಿ ದೂರವಾಣಿ ಕರೆ ವ್ಯವಸ್ಥೆ ಮೂಲಕ ದಾಖಲಿಸಬಹುದಾಗಿದೆ. ಪ್ರಶ್ನೆಗಳಿಗೆ ನೀಡಿದ ಉತ್ತರಗಳು ಗಣಕೀಕೃತವಾಗಿ ಒಂದು ದತ್ತಾಂಶದಲ್ಲಿ ಸಂಗ್ರಹವಾಗುತ್ತದೆ. <br /> <br /> ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದು ಯಶಸ್ವಿಯಾದಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ಗ್ರಾಮ ನೈರ್ಮಲ್ಯ ಕೇಂದ್ರಗಳು ಮತ್ತುವೈದ್ಯಾಧಿಕಾರಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಹೇಳಿದರು.<br /> <br /> ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥಾಪಕ ಅಧ್ಯಕ್ಷ ಡಾ.ಆರ್.ಬಾಲಸುಬ್ರಹ್ಮಣ್ಯಂ ಮಾತನಾಡಿ, `ಜಿಲ್ಲೆಯ 137 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಪ್ರಾಯೋಗಿಕವಾಗಿ ಮಾಡಲಾಗುತ್ತಿದೆ. <br /> <br /> ಶುಲ್ಕ ರಹಿತ ದೂರವಾಣಿ ಕರೆ ವ್ಯವಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮಾತ್ರ ಕರೆ ಮಾಡಿ ಕೇಂದ್ರಗಳ ಸಮಸ್ಯೆಗಳು, ಅಗತ್ಯದ ಬಗ್ಗೆ ದಾಖಲಿಸಬಹುದು~ ಎಂದು ಹೇಳಿದರು.<br /> <br /> `ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಸಂಗ್ರಹಿತವಾದ ಮಾಹಿತಿಯಿಂದ ಆರೋಗ್ಯ ಕೇಂದ್ರಗಳ ಶ್ರೇಣಿ ಪಟ್ಟಿಯನ್ನು ತಯಾರಿಸಿ ಅದನ್ನು ಸಮುದಾಯ, ಜನಪ್ರತಿನಿಧಿಗಳು ಮತ್ತು ಇಲಾಖೆ ಸಿಬ್ಬಂದಿಗಳಿಗೆ ತಿಳಿಸಲಾಗುತ್ತದೆ. <br /> <br /> ಇದರಿಂದ ಸಮುದಾಯದ ಪ್ರತಿನಿಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ~ ಎಂದು ತಿಳಿಸಿದರು. <br /> <br /> ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಂ.ಮಾಲೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವೇಕಾನಂದ ಯೂತ್ ಮೂವ್ಮೆಂಟ್ನ ಬಸವರಾಜು ಪ್ರಾಸ್ತಾವಿಕ ಭಾಷಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>