<p>ಕೆ.ಆರ್.ನಗರ: `ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಿಲ್ಲ~ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ ಭಾನುವಾರ ಇಲ್ಲಿ ಸ್ಪಷ್ಟಪಡಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೆ.ಆರ್.ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ನಾನು 5ನೇ ತರಗತಿಯಿಂದಲೇ ಆರ್ಎಸ್ಎಸ್ನಲ್ಲಿ ಬೆಳೆದವನು. ಅಖಂಡ ಭಾರತದ ಕನಸು ಹೊತ್ತವನು. ಕೊಡಗು ಪ್ರತ್ಯೇಕತೆಯ ವಿರುದ್ಧ ಹೋರಾಡಿದವನು. ಇಂತಹ ಸಂದರ್ಭದಲ್ಲಿ ನಾನು ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಲು ಸಾಧ್ಯವೇ~ ಎಂದು ಪ್ರಶ್ನಿಸಿದರು. <br /> <br /> `ರಾಜ್ಯಕ್ಕೊಂದು ಕಾನೂನು ಕೊಡಗು ಜಿಲ್ಲೆಗೆ ಒಂದು ಕಾನೂನು ಮಾಡುವುದು ಬೇಡ. ನಮ್ಮ ಜಿಲ್ಲೆಗೆ ಅನ್ಯಾಯವಾದಾಗ ಸುಮ್ಮನಿರಲೂ ಸಾಧ್ಯವಿಲ್ಲ. ಜುಲೈ19ರಂದು ಪತ್ರಿಕೆಗಳಲ್ಲಿ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ~ ಎಂದರು. <br /> <br /> ಶಾಸಕ ಸಾ.ರಾ.ಮಹೇಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್, ಪಕ್ಷದ ವಕ್ತಾರ ಕೆ.ಎಲ್.ರಮೇಶ್, ಆನಂದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ನಗರ: `ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಿಲ್ಲ~ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ ಭಾನುವಾರ ಇಲ್ಲಿ ಸ್ಪಷ್ಟಪಡಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೆ.ಆರ್.ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ನಾನು 5ನೇ ತರಗತಿಯಿಂದಲೇ ಆರ್ಎಸ್ಎಸ್ನಲ್ಲಿ ಬೆಳೆದವನು. ಅಖಂಡ ಭಾರತದ ಕನಸು ಹೊತ್ತವನು. ಕೊಡಗು ಪ್ರತ್ಯೇಕತೆಯ ವಿರುದ್ಧ ಹೋರಾಡಿದವನು. ಇಂತಹ ಸಂದರ್ಭದಲ್ಲಿ ನಾನು ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಲು ಸಾಧ್ಯವೇ~ ಎಂದು ಪ್ರಶ್ನಿಸಿದರು. <br /> <br /> `ರಾಜ್ಯಕ್ಕೊಂದು ಕಾನೂನು ಕೊಡಗು ಜಿಲ್ಲೆಗೆ ಒಂದು ಕಾನೂನು ಮಾಡುವುದು ಬೇಡ. ನಮ್ಮ ಜಿಲ್ಲೆಗೆ ಅನ್ಯಾಯವಾದಾಗ ಸುಮ್ಮನಿರಲೂ ಸಾಧ್ಯವಿಲ್ಲ. ಜುಲೈ19ರಂದು ಪತ್ರಿಕೆಗಳಲ್ಲಿ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ~ ಎಂದರು. <br /> <br /> ಶಾಸಕ ಸಾ.ರಾ.ಮಹೇಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್, ಪಕ್ಷದ ವಕ್ತಾರ ಕೆ.ಎಲ್.ರಮೇಶ್, ಆನಂದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>