<p><span style="font-size: 26px;"><strong>ಎಚ್.ಡಿ.ಕೋಟೆ: </strong>ವೈಷಮ್ಯದ ಹಿನ್ನೆಲೆಯಲ್ಲಿ ಜಮೀನಲ್ಲಿ ಬೆಳೆಯಲಾಗಿದ್ದ ಅವರೆ ಫಸಲನ್ನು ದುಷ್ಕರ್ಮಿಗಳು ನಾಶಪಡಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.</span><br /> <br /> ತಾಲ್ಲೂಕಿನ ಕರಿಗಳ ಗ್ರಾಮದಲ್ಲಿ ವಾಸವಾಗಿರುವ ತಾಯಮ್ಮ -ಪುಟ್ಟಸ್ವಾಮಿ ದಂಪತಿಗೆ ಸೇರಿದ ಜಮೀನಿನಲ್ಲಿ ಬೆಳೆಯಲಾಗಿದ್ದ ಹತ್ತಿ ಮತ್ತು ಅವರೆ ಗಿಡಗಳನ್ನು ನಾಶಪಡಿಸಲಾಗಿದೆ. ಇದರಿಂದ ಲಕ್ಷಾಂತರ ಆದಾಯ ಬರುವ ಬೆಳೆ ನಾಶವಾಗಿದೆ.<br /> <br /> ಕಿಡಿಗೇಡಿಗಳು ಹದಿನೈದು ದಿನದ ಹಿಂದೆ ಕೊಟ್ಟಿಗೆ ಮತ್ತು ಮನೆಗೆ ಬೆಂಕಿ ಹಚ್ಚಿದ್ದಾರೆ. ಸಂಪೂರ್ಣವಾಗಿ ಕೊಟ್ಟಿಗೆ ಸುಟ್ಟು ಹೋಗಿದೆ. ಮನೆಗೂ ಬೆಂಕಿ ಹಚ್ಚಲಾಗಿದ್ದು, ಮನೆಯವರೆಲ್ಲ ಎಚ್ಚರಗೊಂಡು ಬೆಂಕಿ ಆರಿಸಿದ್ದಾರೆ. ಈ ಸಂಬಂಧ ಹಂಪಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.<br /> <br /> ಈ ಹಂತದಲ್ಲಿಯೇ ಜಮೀನಿನಲ್ಲಿ ಬೆಳೆದು ನಿಂತ ಹತ್ತಿ ಮತ್ತು ಅವರೆ ಗಿಡಗಳನ್ನು ಸಂಪೂರ್ಣವಾಗಿ ಕಿತ್ತು ಹಾಕಿದ್ದಾರೆ. `ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಪರಿಹಾರ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಎಚ್.ಡಿ.ಕೋಟೆ: </strong>ವೈಷಮ್ಯದ ಹಿನ್ನೆಲೆಯಲ್ಲಿ ಜಮೀನಲ್ಲಿ ಬೆಳೆಯಲಾಗಿದ್ದ ಅವರೆ ಫಸಲನ್ನು ದುಷ್ಕರ್ಮಿಗಳು ನಾಶಪಡಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.</span><br /> <br /> ತಾಲ್ಲೂಕಿನ ಕರಿಗಳ ಗ್ರಾಮದಲ್ಲಿ ವಾಸವಾಗಿರುವ ತಾಯಮ್ಮ -ಪುಟ್ಟಸ್ವಾಮಿ ದಂಪತಿಗೆ ಸೇರಿದ ಜಮೀನಿನಲ್ಲಿ ಬೆಳೆಯಲಾಗಿದ್ದ ಹತ್ತಿ ಮತ್ತು ಅವರೆ ಗಿಡಗಳನ್ನು ನಾಶಪಡಿಸಲಾಗಿದೆ. ಇದರಿಂದ ಲಕ್ಷಾಂತರ ಆದಾಯ ಬರುವ ಬೆಳೆ ನಾಶವಾಗಿದೆ.<br /> <br /> ಕಿಡಿಗೇಡಿಗಳು ಹದಿನೈದು ದಿನದ ಹಿಂದೆ ಕೊಟ್ಟಿಗೆ ಮತ್ತು ಮನೆಗೆ ಬೆಂಕಿ ಹಚ್ಚಿದ್ದಾರೆ. ಸಂಪೂರ್ಣವಾಗಿ ಕೊಟ್ಟಿಗೆ ಸುಟ್ಟು ಹೋಗಿದೆ. ಮನೆಗೂ ಬೆಂಕಿ ಹಚ್ಚಲಾಗಿದ್ದು, ಮನೆಯವರೆಲ್ಲ ಎಚ್ಚರಗೊಂಡು ಬೆಂಕಿ ಆರಿಸಿದ್ದಾರೆ. ಈ ಸಂಬಂಧ ಹಂಪಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.<br /> <br /> ಈ ಹಂತದಲ್ಲಿಯೇ ಜಮೀನಿನಲ್ಲಿ ಬೆಳೆದು ನಿಂತ ಹತ್ತಿ ಮತ್ತು ಅವರೆ ಗಿಡಗಳನ್ನು ಸಂಪೂರ್ಣವಾಗಿ ಕಿತ್ತು ಹಾಕಿದ್ದಾರೆ. `ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಪರಿಹಾರ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>