<p><strong>ನಂಜನಗೂ</strong>ಡು: ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅಂಗವಾಗಿ ಶುಕ್ರವಾರ ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಹಸಿರು- ತೋರಣಗಳಿಂದ ಸಿಂಗರಿಸಲಾಗಿತ್ತು. ಆವರಣ ಶುಚಿಗೊಳಿಸಿ, ರಂಗೋಲಿ ಚಿತ್ತಾರ ಬಿಡಿಸಿ, ವಿವಿಧ ಹೂವುಗಳನ್ನು ಹರಡುವ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಲಾಗಿಯಿತು.<br /> <br /> ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆ ಏರ್ಪಡಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಅರಿವು ಮೂಡಿಸುವ ವಿವಿಧ ಬ್ಯಾನರ್ ಪ್ರದರ್ಶಿಸಲಾಯಿತು. ಈವರೆಗೆ 122 ಮಕ್ಕಳು ನೋಂದಣಿಯಾಗಿರುವ ಈ ಶಾಲೆಗೆ ಮೊದಲ ದಿನವೇ 75 ಮಕ್ಕಳು ಹಾಜರಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪುರುಷೋತ್ತಮ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು. ವಿದ್ಯಾರ್ಥಿಗಳಿಗೆ ಮೊದಲ ದಿನದ ಬಿಸಿಯೂಟವಾಗಿ ಬಿಸಿಬೇಳೆ ಬಾತ್, ಪಾಯಸ ಬಡಿಸಲಾಯಿತು.<br /> <br /> ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಹೇಶ್, ಮುಖ್ಯ ಶಿಕ್ಷಕ ಸದಾಶಿವಪ್ಪ, ಸಹಶಿಕ್ಷಕರಾದ ಸತೀಶ್, ಭಾಗ್ಯಲಕ್ಷ್ಮಿ, ಜಯಂತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ, ಅಡುಗೆ ಸಿಬ್ಬಂದಿ ಸರಸ್ವತಿ, ಗಾಯತ್ರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂ</strong>ಡು: ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅಂಗವಾಗಿ ಶುಕ್ರವಾರ ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಹಸಿರು- ತೋರಣಗಳಿಂದ ಸಿಂಗರಿಸಲಾಗಿತ್ತು. ಆವರಣ ಶುಚಿಗೊಳಿಸಿ, ರಂಗೋಲಿ ಚಿತ್ತಾರ ಬಿಡಿಸಿ, ವಿವಿಧ ಹೂವುಗಳನ್ನು ಹರಡುವ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಲಾಗಿಯಿತು.<br /> <br /> ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆ ಏರ್ಪಡಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಅರಿವು ಮೂಡಿಸುವ ವಿವಿಧ ಬ್ಯಾನರ್ ಪ್ರದರ್ಶಿಸಲಾಯಿತು. ಈವರೆಗೆ 122 ಮಕ್ಕಳು ನೋಂದಣಿಯಾಗಿರುವ ಈ ಶಾಲೆಗೆ ಮೊದಲ ದಿನವೇ 75 ಮಕ್ಕಳು ಹಾಜರಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪುರುಷೋತ್ತಮ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು. ವಿದ್ಯಾರ್ಥಿಗಳಿಗೆ ಮೊದಲ ದಿನದ ಬಿಸಿಯೂಟವಾಗಿ ಬಿಸಿಬೇಳೆ ಬಾತ್, ಪಾಯಸ ಬಡಿಸಲಾಯಿತು.<br /> <br /> ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಹೇಶ್, ಮುಖ್ಯ ಶಿಕ್ಷಕ ಸದಾಶಿವಪ್ಪ, ಸಹಶಿಕ್ಷಕರಾದ ಸತೀಶ್, ಭಾಗ್ಯಲಕ್ಷ್ಮಿ, ಜಯಂತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ, ಅಡುಗೆ ಸಿಬ್ಬಂದಿ ಸರಸ್ವತಿ, ಗಾಯತ್ರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>