ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಬಹುಮುಖಿ ಪ್ರತಿಭೆಯನ್ನು ಹೊಂದುವ ಎಲ್ಲ ಅವಕಾಶಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ. ಇದನ್ನು ಭವಿಷ್ಯದಲ್ಲಿ ಮತ್ತಷ್ಟು ಉತ್ತಮಗೊಳಿಸಲಾಗುವುದು. ‘ವಿದ್ಯುತ್’ ಮಾದರಿಯ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿವೆ ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಎಸ್.ಎನ್. ಲಕ್ಷ್ಮಿನಾರಾಯಣ, ಕಾಲೇಜಿನ ಪ್ರಾಂಶು ಪಾಲ ಡಿ.ಸದಾಶಿವೇಗೌಡ ಇದ್ದರು.ನಂತರ ಕಾಲೇಜಿನ ಎನ್ಎಸ್ಎಸ್ ಹಾಗೂ ರೆಡ್ಕ್ರಾಸ್ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರ ನಡೆಯಿತು.