ತಿ.ನರಸೀಪುರ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಖಾಸಗಿ ಶಾಲೆಗಳು ಶ್ರಮಿಸುತ್ತಿವೆ ಎಂದು ವಾಟಾಳು ಸೂರ್ಯಸಿಂಹಾಸನ ಮಠದ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಟಿಎಪಿಸಿಎಂಎಸ್ ಭವನದಲ್ಲಿ ಶನಿವಾರ ನಡೆದ ಎನ್ಕೆಎಫ್ ಶಾಲೆ ವಾರ್ಷಿಕೋತ್ಸವದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ಶಾಲೆಯ ಅಧ್ಯಕ್ಷ ಎನ್.ಕೆ.ಫರೀದ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಮನ್ಸೂರು ಅಲಿ, ವಕ್ಫ್ ಬೋರ್ಡ್ ಅಧ್ಯಕ್ಷ ಸಯ್ಯದ್ ಅಹ್ಮದ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್, ಆರ್.ನಾಗೇಂದ್ರಕುಮಾರ್, ಆಡಳಿತ ಮಂಡಳಿ ಸದಸ್ಯರಾದ ರಾಜಣ್ಣ, ರಾಮಸ್ವಾಮಿ, ಹುಣಸೂರು ಬಸವಣ್ಣ, ಮಿನಿ ದ್ವಾರಕೀಶ್, ಮುಖ್ಯ ಶಿಕ್ಷಕಿ ಸಾಹಿದಾ ಕೌಸರ್ ಮತ್ತಿತರರು ಉಪಸ್ಥಿತರಿದ್ದರು.