‘ನಮ್ಮ ಶಾಲೆಯಲ್ಲಿ ಪ್ರತಿ ಶನಿವಾರ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಗುತ್ತಿದೆ. ಅಲ್ಲದೇ, ಪ್ರತಿ ತಿಂಗಳ 3ನೇ ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಅಂದು ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲಾಗುತ್ತಿದೆ’ ಎಂದು ಶಿಕ್ಷಕರಾದ ಎನ್.ಡಿ.ನಾದ, ಬಿ.ಎಸ್.ಕೊಟಾರಗಸ್ತಿ, ವಿ.ಎಂ.ಚೌಧರಿ, ಜಿ.ಆರ್.ಕಾಖಂಡಕಿ, ಜೆ.ಎಸ್.ಪಾಟೀಲ ಹೆಮ್ಮೆಯಿಂದ ಹೇಳಿದರು.