<p><strong>ರಾಮನಗರ: </strong>ಪ್ರಸ್ತುತ ಸಮಯದಲ್ಲಿ ಜನಪದ ಸಾಹಿತ್ಯದ ವಿವಿಧ ಪ್ರಕಾರ ಕಣ್ಮರೆಯಾಗುತ್ತಿದ್ದು, ಹೀಗಾಗಿ ಲಾವಣಿ ಸಾಹಿತ್ಯವನ್ನು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಚಯಿಸಿ ಪ್ರಚಾರ ಮಾಡುವುದು ಅಗತ್ಯವಾಗಿದೆ ಎಂದು ಲಾವಣಿ ಹಾಡುಗಾರ ಬಾಪುಗೌಡ ಆರ್. ಪೊಲೀಸ್ ಪಾಟೀಲ ಹೇಳಿದರು.</p>.<p>ಇಲ್ಲಿನ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ನಡೆದ ‘ತಿಂಗಳ ಕಲಾ ಬೆಳಕು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸೌಂದರ್ಯ, ವೀರತನಗಳಿಗೆ ಸಂಬಂಧಿಸಿದಂತೆ ಲಾವಣಿ ರಚನೆಯಾಗಿವೆ. ಲಾವಣಿಗಳಲ್ಲಿ ಮೇಳ ಲಾವಣಿ, ಒಂಟಿ ಲಾವಣಿ ಪ್ರಕಾರಗಳಿವೆ. ದೇಶದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ವೀರತನದ ಕಥೆ ಆಧರಿಸಿ ಲಾವಣಿ ಪದ ಹಾಡುವ ಪದ್ಧತಿ ಇತ್ತು. ಇದೇ ಮುಂದೆ ದೇಶಭಕ್ತಿ ಗೀತೆಗಳಾದವು ಎಂದರು.</p>.<p>ಲಾವಣಿ ಸಾಹಿತ್ಯ ಮೊದಲು ಪುರುಷರಿಗೆ ಮಾತ್ರ ಸೀಮಿತವಾಗಿತ್ತು. ನಂತರದಲ್ಲಿ ಹೆಣ್ಣು ಮಕ್ಕಳು ಹಾಡಲು ಪ್ರಾರಂಭಿಸಿದರು. ಲಾವಣಿ ಸಾಹಿತ್ಯ ಸಾಮಾನ್ಯ ಜನರಿಗೆ ಅರ್ಥವಾಗುವ ಸಾಹಿತ್ಯ ಎಂದು ತಿಳಿಸಿದರು.</p>.<p>ಜಾನಪದ ಸಾಹಿತ್ಯವಾದ ಲಾವಣಿ, ಜಾನಪದ ಗೀತೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಜೀವಂತವಾಗಿವೆ. ಕನ್ನಡ ಭಾಷೆ ಉಳಿದು ಬಾಳಬೇಕಾದರೆ ರಾಜ್ಯದ ಕಟ್ಟ ಕಡೆಯ ಪ್ರಜೆಗೂ ಕನ್ನಡ ಸಾಹಿತ್ಯ ಹಾಗೂ ಸಂಗೀತ ತಲುಪಿದಾಗ ಮಾತ್ರ ಸಾಧ್ಯ ಎಂದು ತಿಳಿಸಿದರು.</p>.<p>ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಜಾನಪದ ಸಾಹಿತ್ಯ ಕುರಿತು ಕಮ್ಮಟಗಳನ್ನು ಏರ್ಪಡಿಸಿ ವಿವಿಧ ಪ್ರಕಾರಗಳ ಜಾನಪದ ಗೀತೆಗಳನ್ನು ಹಾಡಲು ತರಬೇತಿ ನೀಡಬೇಕು ಎಂದು ತಿಳಿಸಿದರು.</p>.<p>ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸು.ತ.ರಾಮೇಗೌಡ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯದ ಮಹತ್ವವನ್ನು ಎಲ್ಲರೂ ತಿಳಿದು, ಇತರರಿಗೂ ತಿಳಿಸುವ ಕಾರ್ಯ ನಡೆಯಬೇಕಿದೆ. ಅನ್ಯಭಾಷೆಗಳ ಹಾವಳಿ ನಡುವೆ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಜೀವಂತವಾಗಿದೆ ಎಂದು ತಿಳಿಸಿದರು.</p>.<p>ಶಾಂತಲಾ ಚಾರಿಟಬಲ್ ಟ್ರಸ್ಟಿನ ಸಂಸ್ಥಾಪಕಿ ಕವಿತಾರಾವ್ ಮಾತನಾಡಿ, 21 ನೆಯ ಶತಮಾನದಲ್ಲಿ ಜಾನಪದ ಸಾಹಿತ್ಯದ ವಿವಿಧ ಪ್ರಕಾರಗಳು ಕಣ್ಮರೆಯಾಗುತ್ತಿವೆ. ವಿಶೇಷವಾಗಿ ಲಾವಣಿ ಸಾಹಿತ್ಯ ಇಂದಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಚಯಿಸಿ ಪ್ರಸಾರ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.</p>.<p>ಕಲಾವಿದರಾದ ಸಲೀಂ ಹನಗಂಡಿ, ಶೈಲ್ ಹಲ್ಯಾಳ, ಚನ್ನಪ್ಪ, ಉಪನ್ಯಾಸಕ ಹೊಸದೊಡ್ಡಿ ರಮೇಶ್, ಅರ್ಪಿತಾ ಚಾರಿಟಬಲ್ ಟ್ರಸ್ಟಿನ ಎನ್.ವಿ. ಲೋಕೇಶ್, ಪರಿಸರವಾದಿ ಬಿ.ಟಿ. ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಪ್ರಸ್ತುತ ಸಮಯದಲ್ಲಿ ಜನಪದ ಸಾಹಿತ್ಯದ ವಿವಿಧ ಪ್ರಕಾರ ಕಣ್ಮರೆಯಾಗುತ್ತಿದ್ದು, ಹೀಗಾಗಿ ಲಾವಣಿ ಸಾಹಿತ್ಯವನ್ನು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಚಯಿಸಿ ಪ್ರಚಾರ ಮಾಡುವುದು ಅಗತ್ಯವಾಗಿದೆ ಎಂದು ಲಾವಣಿ ಹಾಡುಗಾರ ಬಾಪುಗೌಡ ಆರ್. ಪೊಲೀಸ್ ಪಾಟೀಲ ಹೇಳಿದರು.</p>.<p>ಇಲ್ಲಿನ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ನಡೆದ ‘ತಿಂಗಳ ಕಲಾ ಬೆಳಕು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸೌಂದರ್ಯ, ವೀರತನಗಳಿಗೆ ಸಂಬಂಧಿಸಿದಂತೆ ಲಾವಣಿ ರಚನೆಯಾಗಿವೆ. ಲಾವಣಿಗಳಲ್ಲಿ ಮೇಳ ಲಾವಣಿ, ಒಂಟಿ ಲಾವಣಿ ಪ್ರಕಾರಗಳಿವೆ. ದೇಶದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ವೀರತನದ ಕಥೆ ಆಧರಿಸಿ ಲಾವಣಿ ಪದ ಹಾಡುವ ಪದ್ಧತಿ ಇತ್ತು. ಇದೇ ಮುಂದೆ ದೇಶಭಕ್ತಿ ಗೀತೆಗಳಾದವು ಎಂದರು.</p>.<p>ಲಾವಣಿ ಸಾಹಿತ್ಯ ಮೊದಲು ಪುರುಷರಿಗೆ ಮಾತ್ರ ಸೀಮಿತವಾಗಿತ್ತು. ನಂತರದಲ್ಲಿ ಹೆಣ್ಣು ಮಕ್ಕಳು ಹಾಡಲು ಪ್ರಾರಂಭಿಸಿದರು. ಲಾವಣಿ ಸಾಹಿತ್ಯ ಸಾಮಾನ್ಯ ಜನರಿಗೆ ಅರ್ಥವಾಗುವ ಸಾಹಿತ್ಯ ಎಂದು ತಿಳಿಸಿದರು.</p>.<p>ಜಾನಪದ ಸಾಹಿತ್ಯವಾದ ಲಾವಣಿ, ಜಾನಪದ ಗೀತೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಜೀವಂತವಾಗಿವೆ. ಕನ್ನಡ ಭಾಷೆ ಉಳಿದು ಬಾಳಬೇಕಾದರೆ ರಾಜ್ಯದ ಕಟ್ಟ ಕಡೆಯ ಪ್ರಜೆಗೂ ಕನ್ನಡ ಸಾಹಿತ್ಯ ಹಾಗೂ ಸಂಗೀತ ತಲುಪಿದಾಗ ಮಾತ್ರ ಸಾಧ್ಯ ಎಂದು ತಿಳಿಸಿದರು.</p>.<p>ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಜಾನಪದ ಸಾಹಿತ್ಯ ಕುರಿತು ಕಮ್ಮಟಗಳನ್ನು ಏರ್ಪಡಿಸಿ ವಿವಿಧ ಪ್ರಕಾರಗಳ ಜಾನಪದ ಗೀತೆಗಳನ್ನು ಹಾಡಲು ತರಬೇತಿ ನೀಡಬೇಕು ಎಂದು ತಿಳಿಸಿದರು.</p>.<p>ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸು.ತ.ರಾಮೇಗೌಡ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯದ ಮಹತ್ವವನ್ನು ಎಲ್ಲರೂ ತಿಳಿದು, ಇತರರಿಗೂ ತಿಳಿಸುವ ಕಾರ್ಯ ನಡೆಯಬೇಕಿದೆ. ಅನ್ಯಭಾಷೆಗಳ ಹಾವಳಿ ನಡುವೆ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಜೀವಂತವಾಗಿದೆ ಎಂದು ತಿಳಿಸಿದರು.</p>.<p>ಶಾಂತಲಾ ಚಾರಿಟಬಲ್ ಟ್ರಸ್ಟಿನ ಸಂಸ್ಥಾಪಕಿ ಕವಿತಾರಾವ್ ಮಾತನಾಡಿ, 21 ನೆಯ ಶತಮಾನದಲ್ಲಿ ಜಾನಪದ ಸಾಹಿತ್ಯದ ವಿವಿಧ ಪ್ರಕಾರಗಳು ಕಣ್ಮರೆಯಾಗುತ್ತಿವೆ. ವಿಶೇಷವಾಗಿ ಲಾವಣಿ ಸಾಹಿತ್ಯ ಇಂದಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಚಯಿಸಿ ಪ್ರಸಾರ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.</p>.<p>ಕಲಾವಿದರಾದ ಸಲೀಂ ಹನಗಂಡಿ, ಶೈಲ್ ಹಲ್ಯಾಳ, ಚನ್ನಪ್ಪ, ಉಪನ್ಯಾಸಕ ಹೊಸದೊಡ್ಡಿ ರಮೇಶ್, ಅರ್ಪಿತಾ ಚಾರಿಟಬಲ್ ಟ್ರಸ್ಟಿನ ಎನ್.ವಿ. ಲೋಕೇಶ್, ಪರಿಸರವಾದಿ ಬಿ.ಟಿ. ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>