ಈ ಘಟನೆಯನ್ನು ಖಂಡಿಸಿ ಟ್ವಿಟ್ ಮಾಡಿದ ಜಿಗ್ನೇಶ್ ಮೇವಾನಿ, ಯೋಗಿ ಆದಿತ್ಯನಾಥ ಅವರ ಸರ್ಕಾರದ ಹಣೆಬರಹವನ್ನು ಬಹಿರಂಗಗೊಳಿಸಿದ ಡಾ. ಕಫೀಲ್ ಅವರ ಸಹೋದರ ಬೆಲೆ ತೆರಬೇಕಾಗಿದೆ. ನಿಮ್ಮ ಸಹೋದರನ ಮೇಲೆ ಗುಂಡಿನ ದಾಳಿ ನಡೆದಿದೆ. ನಿಮ್ಮ ತಾಯಿ ಗೌರಿ ಲಂಕೇಶ್ ಅವರನ್ನು ಹತ್ಯೆಗೈಯಲಾಗಿದೆ. ನಿಮ್ಮ ಪ್ರಾಧ್ಯಾಪಕರಾದ ದಾಬೋಲ್ಕರ್, ಕಲ್ಬುರ್ಗಿ, ಪನ್ಸಾರೆ ಅವರು ಮೃತಪಟ್ಟಿದ್ದಾರೆ. ಪ್ರಗತಿಪರರೇ ನಿಮ್ಮ ಬಾಯಿಯನ್ನು ಮುಚ್ಚಿಕೊಳ್ಳಿ.