ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಕಫೀಲ್ ಖಾನ್ ಸಹೋದರನ ಮೇಲೆ ಗುಂಡಿನ ದಾಳಿ; ಬಿಜೆಪಿ ನಡವಳಿಕೆ ಖಂಡಿಸಿದ ಜಿಗ್ನೇಶ್ ಮೇವಾನಿ

Last Updated 11 ಜೂನ್ 2018, 10:38 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಗೋರಖಪುರ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 70 ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಜಾಮೀನಿನ ಮೇಲೆ ಹೊರಗಿರುವ ಡಾ. ಕಫೀಲ್ ಖಾನ್ ಸಹೋದರ  ಕಶೀಫ್ ಜಮೀಲ್ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ಗುಜರಾತ್‌ನ ವಡಗಾಂ ಕ್ಷೇತ್ರದ ಶಾಸಕ ಜಿಗ್ನೇಶ್‌ ಮೇವಾನಿ ಖಂಡಿಸಿದ್ದಾರೆ.

ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಪಕ್ಷದ ನಡವಳಿಕೆ ವಿರುದ್ಧ ಕಿಡಿಕಾರಿ ಸರಣಿ ಟ್ವೀಟ್ ಮಾಡಿದ್ದಾರೆ.

ಈ ಘಟನೆಯನ್ನು ಖಂಡಿಸಿ ಟ್ವಿಟ್ ಮಾಡಿದ ಜಿಗ್ನೇಶ್ ಮೇವಾನಿ, ಯೋಗಿ ಆದಿತ್ಯನಾಥ ಅವರ ಸರ್ಕಾರದ ಹಣೆಬರಹವನ್ನು ಬಹಿರಂಗಗೊಳಿಸಿದ ಡಾ. ಕಫೀಲ್ ಅವರ ಸಹೋದರ ಬೆಲೆ ತೆರಬೇಕಾಗಿದೆ.  ನಿಮ್ಮ ಸಹೋದರನ ಮೇಲೆ ಗುಂಡಿನ ದಾಳಿ ನಡೆದಿದೆ. ನಿಮ್ಮ ತಾಯಿ ಗೌರಿ ಲಂಕೇಶ್‌ ಅವರನ್ನು ಹತ್ಯೆಗೈಯಲಾಗಿದೆ. ನಿಮ್ಮ ಪ್ರಾಧ್ಯಾಪಕರಾದ ದಾಬೋಲ್ಕರ್, ಕಲ್ಬುರ್ಗಿ, ಪನ್ಸಾರೆ ಅವರು ಮೃತಪಟ್ಟಿದ್ದಾರೆ. ಪ್ರಗತಿಪರರೇ ನಿಮ್ಮ ಬಾಯಿಯನ್ನು ಮುಚ್ಚಿಕೊಳ್ಳಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT