ನಿತ್ಯಾನಂದ ಸೇರಿದಂತೆ ಪ್ರಕರಣದ ಮೊದಲ ಮೂವರು ಆರೋಪಿಗಳು ಗುರುವಾರ ವಿಚಾರಣೆಗೆ ಗೈರಾಗಿದ್ದರು. ಆರೋಪಿಗಳ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ಜಾಮೀನು ರಹಿತ ವಾರೆಂಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ಸ್ಥಳೀಯ ನ್ಯಾಯಾಲಯವು ಯಾವುದೇ ಆದೇಶ ಹೊರಡಿಸಬಾರದು ಎಂದು ಆರೋಪಿ ಪರ ವಕೀಲರು ಮನವಿ ಮಾಡಿದರು.