ಬೆಂಗಳೂರು: 'ವಿದ್ಯಾರ್ಥಿಗಳು ಈ ಶತಮಾನದ ಅಗತ್ಯಗಳಾದ ಕೌಶಲ ಹೆಚ್ಚಿಸಿಕೊಳ್ಳುವುದರೊಂದಿಗೆ ಭವಿಷ್ಯಕ್ಕೆ ಭಾಷ್ಯ ಬರೆಯುವ ಹೊಣೆಗಾರಿಕೆ ವಹಿಸಿಕೊಳ್ಳಬೇಕು. ಹೊಸ ಸಂಶೋಧನೆಗಳು, ಸೃಜನಶೀಲ ಚಿಂತನೆ, ಕ್ರಿಯಾಶೀಲ ಕಲಿಕೆ, ವಿಮರ್ಶಾತ್ಮಕ ಆಲೋಚನೆ, ತಾಂತ್ರಿಕ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಆರ್.ವಿ.ವಿಶ್ವವಿದ್ಯಾಲಯದ ಕುಲಪತಿ ವೈ.ಎಸ್.ಆರ್.ಮೂರ್ತಿ ಹೇಳಿದರು.