<p><strong>ಬೆಂಗಳೂರು:</strong> 'ವಿದ್ಯಾರ್ಥಿಗಳು ಈ ಶತಮಾನದ ಅಗತ್ಯಗಳಾದ ಕೌಶಲ ಹೆಚ್ಚಿಸಿಕೊಳ್ಳುವುದರೊಂದಿಗೆ ಭವಿಷ್ಯಕ್ಕೆ ಭಾಷ್ಯ ಬರೆಯುವ ಹೊಣೆಗಾರಿಕೆ ವಹಿಸಿಕೊಳ್ಳಬೇಕು. ಹೊಸ ಸಂಶೋಧನೆಗಳು, ಸೃಜನಶೀಲ ಚಿಂತನೆ, ಕ್ರಿಯಾಶೀಲ ಕಲಿಕೆ, ವಿಮರ್ಶಾತ್ಮಕ ಆಲೋಚನೆ, ತಾಂತ್ರಿಕ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಆರ್.ವಿ.ವಿಶ್ವವಿದ್ಯಾಲಯದ ಕುಲಪತಿ ವೈ.ಎಸ್.ಆರ್.ಮೂರ್ತಿ ಹೇಳಿದರು.</p>.<p>ಜಯನಗರದ ಎನ್ಎಂಕೆಆರ್ವಿ ಕಾಲೇಜಿನಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>'ಕೋವಿಡ್ನಿಂದ ಕಲಿಕೆ ಮತ್ತು ಉದ್ಯೋಗ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದ್ದು, ಅದನ್ನು ನಿಭಾಯಿಸುವ ಬುದ್ಧಿಮತ್ತೆ ಮನುಷ್ಯನ ವಿವೇಕಯುತ ಸಾಮರ್ಥ್ಯವನ್ನು ಅವಲಂಬಿಸಿದೆ. ಕೃತಕ ಬುದ್ಧಿಮತ್ತೆಯ ಉಪಯೋಗದೊಂದಿಗೆ ಭವಿಷ್ಯದ ಬದಲಾವಣೆಗಳಿಗೆ ಹೊಂದಿಕೊಂಡು ಹೆಜ್ಜೆ ಇಡಬೇಕು' ಎಂದರು.</p>.<p>ಘಟಿಕೋತ್ಸವದಲ್ಲಿ ಎನ್ಎಂಕೆಆರ್ವಿ ಮಹಿಳಾ ಕಾಲೇಜಿನ ಒಟ್ಟು 609 ವಿದ್ಯಾರ್ಥಿನಿಯರಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 548 ವಿದ್ಯಾರ್ಥಿನಿಯರು ಪದವಿ ಹಾಗೂ 61 ವಿದ್ಯಾರ್ಥಿನಿಯರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಎನ್ಎಂಕೆಆರ್ವಿ ಕಾಲೇಜು ಪ್ರಾಂಶುಪಾಲರಾದ ಸ್ನೇಹಲತಾ ನಾಡಿಗೇರ್, ಉಪಪ್ರಾಂಶುಪಾಲರಾದ ವಸಂತವಲ್ಲಿ, ಟ್ರಸ್ಟಿ ಎಂ.ಕೆ.ದತ್ತರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ವಿದ್ಯಾರ್ಥಿಗಳು ಈ ಶತಮಾನದ ಅಗತ್ಯಗಳಾದ ಕೌಶಲ ಹೆಚ್ಚಿಸಿಕೊಳ್ಳುವುದರೊಂದಿಗೆ ಭವಿಷ್ಯಕ್ಕೆ ಭಾಷ್ಯ ಬರೆಯುವ ಹೊಣೆಗಾರಿಕೆ ವಹಿಸಿಕೊಳ್ಳಬೇಕು. ಹೊಸ ಸಂಶೋಧನೆಗಳು, ಸೃಜನಶೀಲ ಚಿಂತನೆ, ಕ್ರಿಯಾಶೀಲ ಕಲಿಕೆ, ವಿಮರ್ಶಾತ್ಮಕ ಆಲೋಚನೆ, ತಾಂತ್ರಿಕ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಆರ್.ವಿ.ವಿಶ್ವವಿದ್ಯಾಲಯದ ಕುಲಪತಿ ವೈ.ಎಸ್.ಆರ್.ಮೂರ್ತಿ ಹೇಳಿದರು.</p>.<p>ಜಯನಗರದ ಎನ್ಎಂಕೆಆರ್ವಿ ಕಾಲೇಜಿನಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>'ಕೋವಿಡ್ನಿಂದ ಕಲಿಕೆ ಮತ್ತು ಉದ್ಯೋಗ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದ್ದು, ಅದನ್ನು ನಿಭಾಯಿಸುವ ಬುದ್ಧಿಮತ್ತೆ ಮನುಷ್ಯನ ವಿವೇಕಯುತ ಸಾಮರ್ಥ್ಯವನ್ನು ಅವಲಂಬಿಸಿದೆ. ಕೃತಕ ಬುದ್ಧಿಮತ್ತೆಯ ಉಪಯೋಗದೊಂದಿಗೆ ಭವಿಷ್ಯದ ಬದಲಾವಣೆಗಳಿಗೆ ಹೊಂದಿಕೊಂಡು ಹೆಜ್ಜೆ ಇಡಬೇಕು' ಎಂದರು.</p>.<p>ಘಟಿಕೋತ್ಸವದಲ್ಲಿ ಎನ್ಎಂಕೆಆರ್ವಿ ಮಹಿಳಾ ಕಾಲೇಜಿನ ಒಟ್ಟು 609 ವಿದ್ಯಾರ್ಥಿನಿಯರಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 548 ವಿದ್ಯಾರ್ಥಿನಿಯರು ಪದವಿ ಹಾಗೂ 61 ವಿದ್ಯಾರ್ಥಿನಿಯರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಎನ್ಎಂಕೆಆರ್ವಿ ಕಾಲೇಜು ಪ್ರಾಂಶುಪಾಲರಾದ ಸ್ನೇಹಲತಾ ನಾಡಿಗೇರ್, ಉಪಪ್ರಾಂಶುಪಾಲರಾದ ವಸಂತವಲ್ಲಿ, ಟ್ರಸ್ಟಿ ಎಂ.ಕೆ.ದತ್ತರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>