<p><strong>ವಿಜಯಪುರ:</strong> ‘ನಾವು ಮಾಡುವ ಕೆಲಸ ಪ್ರಾಮಾಣಿಕ ಮತ್ತು ಅತ್ಯುತ್ತಮವಾಗಿದ್ದರೆ ಅದಕ್ಕೆ ಮನ್ನಣೆ, ಗೌರವ ಸಿಕ್ಕೇ ಸಿಗುತ್ತದೆ’ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಷನ್ನ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವೀದ್ ಜಮಾದಾರ ಹೇಳಿದರು.</p>.<p>ನಗರದ ಬಿಎಲ್ಡಿಇ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭ್ರಷ್ಟಾಚಾರ, ಅತ್ಯಾಚಾರ, ವರದಕ್ಷಿಣೆಗಳಂತ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಯುವಕರು ಮುಂದೆ ಬರಬೇಕು. ಶಿಕ್ಷಣದ ಜೊತೆ ದೇಶಪ್ರೇಮ, ಪರಿಸರ ಪ್ರೇಮ ಬೆಳೆಸಿ<br />ಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯುವ ಜನತೆ ಸಮಯಪಾಲನೆ ಮತ್ತು ಶ್ರಮದಾನ ಮುಖಾಂತರ ಸ್ವಚ್ಛತಾಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಂದಿನ ಯುವ ಜನರಿಗೆ ರಾಷ್ಟ್ರೀಯತೆ ಹಾಗೂ ನೈತಿಕತೆಯನ್ನು ಪರಿಚಯಿ<br />ಸಲು, ಸೇವಾಮನೋಭಾವ, ರಾಷ್ಟ್ರಪ್ರೇಮ ಮೈಗೂಡಿಸುವಲ್ಲಿ ಎನ್ಎಸ್ಎಸ್ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಜಿ.ಪೂಜಾರಿ ಮಾತನಾಡಿ, ‘ಒಳ್ಳೆಯದನ್ನು ಮಾಡುವ ಮನಸ್ಸು ನಮ್ಮದಾಗಿರಬೇಕು. ಒಳ್ಳೆಯ ನಾಗರಿಕರಾಗಲು ಎನ್ಎಸ್ಎಸ್ ಸಹಕಾರಿಯಾಗಿದೆ. ಪ್ರತಿಯೊಬ್ಬರು ತಲಾ<br />ಒಂದು ಸಸಿ ನೆಡುವ ಮೂಲಕ ಪರಿಸರವನ್ನು ಬೆಳೆಸೋಣ, ಅದು ಮರವಾದಾಗ ಸಿಗುವ ಆನಂದ ಅಪಾರ’ ಎಂದರು.</p>.<p>ಪ್ರಾಚಾರ್ಯ ಡಾ.ಎಚ್.ಎಂ.ಮುಜಾವರ ಮಾತನಾಡಿದರು. ಭಾರತ ಸೇವಾದಳದ ಜಿಲ್ಲಾ ಘಟಕದ ನಾಗೇಶ ಡೋಣೂರ, ಕಲಾವಿದ ಸೋಮಶೇಖರ ರಾಠೋಡ, ಐಕ್ಯೂಎಸಿ ಸಂಯೋಜಕಿ ಡಾ.ಭಾರತಿ ಮಠ, ಆನಂದ ರಾಠೋಡ ಈ ಸಂದರ್ಭದಲ್ಲಿ ಇದ್ದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ಡಿ.ಬಿ.ಕೋಟಿ ಸ್ವಾಗತಿಸಿದರು. ಪ್ರೊ.ಸುಭಾಸಚಂದ್ರ ಕನ್ನೂರ ನಿರೂಪಿಸಿದರು.ಎನ್ಎಸ್ಎಸ್ ಅಧಿಕಾರಿ ಪ್ರೊ.ಐ.ಬಿ.ಚಿಪ್ಪಲಕಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ನಾವು ಮಾಡುವ ಕೆಲಸ ಪ್ರಾಮಾಣಿಕ ಮತ್ತು ಅತ್ಯುತ್ತಮವಾಗಿದ್ದರೆ ಅದಕ್ಕೆ ಮನ್ನಣೆ, ಗೌರವ ಸಿಕ್ಕೇ ಸಿಗುತ್ತದೆ’ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಷನ್ನ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವೀದ್ ಜಮಾದಾರ ಹೇಳಿದರು.</p>.<p>ನಗರದ ಬಿಎಲ್ಡಿಇ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭ್ರಷ್ಟಾಚಾರ, ಅತ್ಯಾಚಾರ, ವರದಕ್ಷಿಣೆಗಳಂತ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಯುವಕರು ಮುಂದೆ ಬರಬೇಕು. ಶಿಕ್ಷಣದ ಜೊತೆ ದೇಶಪ್ರೇಮ, ಪರಿಸರ ಪ್ರೇಮ ಬೆಳೆಸಿ<br />ಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಯುವ ಜನತೆ ಸಮಯಪಾಲನೆ ಮತ್ತು ಶ್ರಮದಾನ ಮುಖಾಂತರ ಸ್ವಚ್ಛತಾಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಂದಿನ ಯುವ ಜನರಿಗೆ ರಾಷ್ಟ್ರೀಯತೆ ಹಾಗೂ ನೈತಿಕತೆಯನ್ನು ಪರಿಚಯಿ<br />ಸಲು, ಸೇವಾಮನೋಭಾವ, ರಾಷ್ಟ್ರಪ್ರೇಮ ಮೈಗೂಡಿಸುವಲ್ಲಿ ಎನ್ಎಸ್ಎಸ್ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದರು.</p>.<p>ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಜಿ.ಪೂಜಾರಿ ಮಾತನಾಡಿ, ‘ಒಳ್ಳೆಯದನ್ನು ಮಾಡುವ ಮನಸ್ಸು ನಮ್ಮದಾಗಿರಬೇಕು. ಒಳ್ಳೆಯ ನಾಗರಿಕರಾಗಲು ಎನ್ಎಸ್ಎಸ್ ಸಹಕಾರಿಯಾಗಿದೆ. ಪ್ರತಿಯೊಬ್ಬರು ತಲಾ<br />ಒಂದು ಸಸಿ ನೆಡುವ ಮೂಲಕ ಪರಿಸರವನ್ನು ಬೆಳೆಸೋಣ, ಅದು ಮರವಾದಾಗ ಸಿಗುವ ಆನಂದ ಅಪಾರ’ ಎಂದರು.</p>.<p>ಪ್ರಾಚಾರ್ಯ ಡಾ.ಎಚ್.ಎಂ.ಮುಜಾವರ ಮಾತನಾಡಿದರು. ಭಾರತ ಸೇವಾದಳದ ಜಿಲ್ಲಾ ಘಟಕದ ನಾಗೇಶ ಡೋಣೂರ, ಕಲಾವಿದ ಸೋಮಶೇಖರ ರಾಠೋಡ, ಐಕ್ಯೂಎಸಿ ಸಂಯೋಜಕಿ ಡಾ.ಭಾರತಿ ಮಠ, ಆನಂದ ರಾಠೋಡ ಈ ಸಂದರ್ಭದಲ್ಲಿ ಇದ್ದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ಡಿ.ಬಿ.ಕೋಟಿ ಸ್ವಾಗತಿಸಿದರು. ಪ್ರೊ.ಸುಭಾಸಚಂದ್ರ ಕನ್ನೂರ ನಿರೂಪಿಸಿದರು.ಎನ್ಎಸ್ಎಸ್ ಅಧಿಕಾರಿ ಪ್ರೊ.ಐ.ಬಿ.ಚಿಪ್ಪಲಕಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>