ತೀರ್ಥಹಳ್ಳಿ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರ್ಎಸ್ಎಸ್ ಸಂಘಟನೆಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಚಕ್ಕೋಡುಬೈಲು ಬೆನಕ ಭಟ್ (83)ಮೈಸೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.
ಅವರಿಗೆ ಪತ್ನಿ,ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಈಶ್ವರಪ್ಪ ಸೇರಿ ಹಲವರಿಗೆ ಅವರು ಮಾರ್ಗದರ್ಶಕರಾಗಿದ್ದರು. ಇಲ್ಲಿನ ಆರ್ಎಸ್ಎಸ್ ಕಚೇರಿ ಪ್ರೇರಣಾದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.