ಪುರಸಭೆ ವ್ಯಾಪ್ತಿಯಲ್ಲಿ ಕಸದ ರಾಶಿ ಬಿದ್ದಿದೆ. ಕಸವನ್ನು ಬರಿಕೈಯಲ್ಲಿ ಎತ್ತುವ ಗುತ್ತಿಗೆ ನೌಕರರಿಗೆ ಮೂರು ತಿಂಗಳಿಂದಲೂ ವೇತನ ನೀಡಿಲ್ಲ. ಹೊಟ್ಟೆಗೆ ಹಿಟ್ಟಿಲ್ಲದೆ ಕಸ ತೆಗೆಯಲು ಗುತ್ತಿಗೆ ಆದಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರು ಸಂಕಟ ಎದುರಿಸುತ್ತಿದ್ದಾರೆ. ಒಂದೆಡೆ ಗೋರಕ್ಷಕರು ಕಸದಲ್ಲಿ ಪ್ಲಾಸ್ಟಿಕ್ ತಿಂದು ಹಸು ನೀಗುತ್ತಿರುವ ರಾಸುಗಳನ್ನು ಕಂಡೂ ಕಾಣದಂತೆ ಮುನ್ನೆಡೆಯುತ್ತಿದ್ದಾರೆ. ಪ್ರಚಾರಕ್ಕಾಗಿ ಗೋರಕ್ಷಕರು ಎನ್ನುವ ಬದಲು, ಬೀದಿ ಬದಿಯಲ್ಲಿ ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಬಿಡಾಡಿ ದನಗಳನ್ನು ರಕ್ಷಿಸಬೇಕು. ಕಸದ ರಾಶಿಯನ್ನು ತೆಗೆಸಲು ಪುರಸಭೆ ಪ್ರತಿನಿಧಿಗಳು ಮನಸ್ಸು ಮಾಡಲಿ ಎಂದರು.