ಮುಖ್ಯಮಂತ್ರಿ ಸೀಟಿಗೆ ಟವಲ್: ‘ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಮೇಲೆ ಸಿದ್ದರಾಮಯ್ಯ, ಖರ್ಗೆ ಸೇರಿದಂತೆ ಕಾಂಗ್ರೆಸ್ನ ಅನೇಕರು ಟವಲ್ ಹಾಕಿದ್ದಾರೆ. ಆ ಕುರ್ಚಿ ಖಾಲಿ ಇದೆ ಎಂದು ತಾನೂ ಮುಖ್ಯಮಂತ್ರಿ ಆಗಬೇಕು ಎಂಬಂತೆ ಅನೇಕ ನಾಯಕರಲ್ಲಿ ಸ್ಪರ್ಧೆ ಏರ್ಪಟ್ಟಿದೆ.ಜೆಡಿಎಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರೇವಣ್ಣ ಹೆಸರು ಕೇಳಿಬಂದರೆ, ಹಿರಿಯ ಶಾಸಕ ಬಸವರಾಜ ಹೊರಟ್ಟಿ ಮೈತ್ರಿಯಲ್ಲಿ ಗೊಂದಲ ಇರುವುದರಿಂದ ಸರ್ಕಾರವನ್ನೇ ವಿಸರ್ಜಿಸಬೇಕು ಎನ್ನುವ ಮೂಲಕ ಸರ್ಕಾರ ಹೆಚ್ಚು ದಿನ ಇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ’ ಎಂದರು.