<p><strong>ಶಿವಮೊಗ್ಗ: </strong>ಪ್ರಧಾನಮಂತ್ರಿಗಳ ಆವಾಸ್ ಯೋಜನೆಯ ಮನೆಗಳ ನಿರ್ಮಾಣವಿಳಂಬ ಖಂಡಿಸಿ ಕೊಳಚೆ ಪ್ರದೇಶದ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರಪಾಲಿಕೆ ವ್ಯಾಪ್ತಿಯಲ್ಲಿ 9 ಘೋಷಿತ ಕೊಳಚೆ ಪ್ರದೇಶಗಳಿವೆ. ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿಸುಮಾರು 1,590 ಮನೆಗಳನ್ನು ನಿರ್ಮಾಣ ಮಾಡಲು 2019ರ ಜನವರಿಯಲ್ಲೇಆರಂಭಮಾಡಲಾಗಿತ್ತು. ಅರ್ಹ ಫಲಾನುಭವಿಗಳೂ ನಿಗದಿತ ಮೊತ್ತ ಪಾವತಿಸಿದ್ದರು. ಒಪ್ಪಂದದ ಪ್ರಕಾರ 6 ತಿಂಗಳ ಒಳಗೆ ಮನೆ ಕಟ್ಟಿಕೊಡಬೇಕಿತ್ತು. ಇದುವರೆಗೂ ಮನೆಗಳ ನಿರ್ಮಾಣಪೂರ್ಣಗೊಂಡಿಲ್ಲ ಎಂದು ದೂರಿದರು.</p>.<p>ಈಗಾಗಲೇ 12 ತಿಂಗಳ ಅವಧಿ ಮುಗಿದಿದೆ. ಮನೆಗಳಿಗೆ ಗಿಲಾವ್ ಆಗಿಲ್ಲ. ವೈರಿಂಗ್ ಆಗಿಲ್ಲ, ಕಿಟಕಿ, ಬಾಗಿಲುಗಳೂ ಇಲ್ಲ. ನೆಲಹಾಸು ಸಿದ್ದವಾಗಿಲ್ಲ. ಎಲ್ಲ ಮನೆಗಳು ಅಪೂರ್ಣವಾಗಿವೆ. ಅವೈಜ್ಞಾನಿಕವಾಗಿವೆ ಎಂದು ಆರೋಪಿಸಿದರು.</p>.<p>ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೀಶ್, ರಮೇಶ್ ಹೆಗ್ಡೆ, ಶಮೀರ್ ಖಾನ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮುಖಂಡರಾದಪಂಡಿತ್ ವಿ.ವಿಶ್ವನಾಥ್, ಮಂಜುಳಾ ಶಿವಣ್ಣ, ಶರೀಫ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಪ್ರಧಾನಮಂತ್ರಿಗಳ ಆವಾಸ್ ಯೋಜನೆಯ ಮನೆಗಳ ನಿರ್ಮಾಣವಿಳಂಬ ಖಂಡಿಸಿ ಕೊಳಚೆ ಪ್ರದೇಶದ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರಪಾಲಿಕೆ ವ್ಯಾಪ್ತಿಯಲ್ಲಿ 9 ಘೋಷಿತ ಕೊಳಚೆ ಪ್ರದೇಶಗಳಿವೆ. ಕೊಳಚೆ ಪ್ರದೇಶ ಅಭಿವೃದ್ಧಿ ನಿಗಮ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿಸುಮಾರು 1,590 ಮನೆಗಳನ್ನು ನಿರ್ಮಾಣ ಮಾಡಲು 2019ರ ಜನವರಿಯಲ್ಲೇಆರಂಭಮಾಡಲಾಗಿತ್ತು. ಅರ್ಹ ಫಲಾನುಭವಿಗಳೂ ನಿಗದಿತ ಮೊತ್ತ ಪಾವತಿಸಿದ್ದರು. ಒಪ್ಪಂದದ ಪ್ರಕಾರ 6 ತಿಂಗಳ ಒಳಗೆ ಮನೆ ಕಟ್ಟಿಕೊಡಬೇಕಿತ್ತು. ಇದುವರೆಗೂ ಮನೆಗಳ ನಿರ್ಮಾಣಪೂರ್ಣಗೊಂಡಿಲ್ಲ ಎಂದು ದೂರಿದರು.</p>.<p>ಈಗಾಗಲೇ 12 ತಿಂಗಳ ಅವಧಿ ಮುಗಿದಿದೆ. ಮನೆಗಳಿಗೆ ಗಿಲಾವ್ ಆಗಿಲ್ಲ. ವೈರಿಂಗ್ ಆಗಿಲ್ಲ, ಕಿಟಕಿ, ಬಾಗಿಲುಗಳೂ ಇಲ್ಲ. ನೆಲಹಾಸು ಸಿದ್ದವಾಗಿಲ್ಲ. ಎಲ್ಲ ಮನೆಗಳು ಅಪೂರ್ಣವಾಗಿವೆ. ಅವೈಜ್ಞಾನಿಕವಾಗಿವೆ ಎಂದು ಆರೋಪಿಸಿದರು.</p>.<p>ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೀಶ್, ರಮೇಶ್ ಹೆಗ್ಡೆ, ಶಮೀರ್ ಖಾನ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮುಖಂಡರಾದಪಂಡಿತ್ ವಿ.ವಿಶ್ವನಾಥ್, ಮಂಜುಳಾ ಶಿವಣ್ಣ, ಶರೀಫ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>