ವ್ಯಾಪಾರಿಗಳು, ರಸ್ತೆಬದಿ ವ್ಯಾಪಾರಿಗಳು ಕಸವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಅಂತಹ ವ್ಯಾಪಾರಿಗಳಿಗೆ ಸೂಕ್ತ ಎಚ್ಚರಿಕೆ ನೀಡಬೇಕು. ದಂಡ ವಿಧಿಸಬೇಕು. ಚೆನ್ನಾಗಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಉತ್ತೇಜನ ಬಹುಮಾನ ನೀಡಬೇಕು. ಕೆಲಸ ಮಾಡದವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಪೌರಕಾರ್ಮಿಕರ ಜತೆ ಆರೋಗ್ಯ ನಿರೀಕ್ಷಕರು ಕಡ್ಡಾಯವಾಗಿ ತಿರುಗಾಟ ನಡೆಸಬೇಕು ಎಂದು ತಾಕೀತು ಮಾಡಿದರು.