<p><strong>ವಿಜಯಪುರ</strong>: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರನ್ನು ಶಿಕ್ಷೆಗೆ ಒಳಪಡಿಸುವ ಜೊತೆಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದ್ದಾರೆ.</p>.<p>ಕೊರೊನಾ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆಗಾಗಿ ಸಾರ್ವಜನಿಕರು ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.</p>.<p>ಈ ಆದೇಶವನ್ನು ಉಲ್ಲಂಘಿಸಿದರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹200 ಮತ್ತು ಮಹಾನಗರ ಪಾಲಿಕೆ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದು ಎಂದರು.</p>.<p>ಈ ಕುರಿತಂತೆ ಸಬ್ ಇನ್ಸ್ಪೆಕ್ಟರ್, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರು, ಪಿಡಿಒ ಅಥವಾ ಸರ್ಕಾರದಿಂದ ನಿಯೋಜಿತ ಅಧಿಕೃತ ಅಧಿಕಾರಿಗಳ ಮೂಲಕ ಈ ದಂಡ ವಿಧಿಸಲು ಅಧಿಕಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕೋವಿಡ್-19 ಲಾಕ್ಡೌನ್ ಅವಧಿಯನ್ನು ಮೇ 17ರ ವರೆಗೆ ವಿಸ್ತರಿಸಲಾಗಿದ್ದು, ಕೆಲವು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕವಾಗಿ ಒಬ್ಬರಿಗಿಂತ ಹೆಚ್ಚು ಜನ ಗುಂಪುಗುಂಪಾಗಿ ಸೇರುವುದು ಕಂಡುಬಂದಲ್ಲಿ ಅಂತಹವರ ಮೇಲೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರನ್ನು ಶಿಕ್ಷೆಗೆ ಒಳಪಡಿಸುವ ಜೊತೆಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದ್ದಾರೆ.</p>.<p>ಕೊರೊನಾ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆಗಾಗಿ ಸಾರ್ವಜನಿಕರು ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.</p>.<p>ಈ ಆದೇಶವನ್ನು ಉಲ್ಲಂಘಿಸಿದರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹200 ಮತ್ತು ಮಹಾನಗರ ಪಾಲಿಕೆ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ₹100 ದಂಡ ವಿಧಿಸಲಾಗುವುದು ಎಂದರು.</p>.<p>ಈ ಕುರಿತಂತೆ ಸಬ್ ಇನ್ಸ್ಪೆಕ್ಟರ್, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರು, ಪಿಡಿಒ ಅಥವಾ ಸರ್ಕಾರದಿಂದ ನಿಯೋಜಿತ ಅಧಿಕೃತ ಅಧಿಕಾರಿಗಳ ಮೂಲಕ ಈ ದಂಡ ವಿಧಿಸಲು ಅಧಿಕಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕೋವಿಡ್-19 ಲಾಕ್ಡೌನ್ ಅವಧಿಯನ್ನು ಮೇ 17ರ ವರೆಗೆ ವಿಸ್ತರಿಸಲಾಗಿದ್ದು, ಕೆಲವು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕವಾಗಿ ಒಬ್ಬರಿಗಿಂತ ಹೆಚ್ಚು ಜನ ಗುಂಪುಗುಂಪಾಗಿ ಸೇರುವುದು ಕಂಡುಬಂದಲ್ಲಿ ಅಂತಹವರ ಮೇಲೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>