<p><strong>ತಿಕೋಟಾ:</strong> ‘ಎಲ್ಲ ಶಾಲೆಗಳ ಆವರಣಗಳಲ್ಲಿ ಸಸಿಗಳನ್ನು ನೆಟ್ಟು, ಬೆಳೆಸಿ, ಹಸಿರು ವನವನ್ನಾಗಿ ಮಾಡಬೇಕು’ ಎಂದು ಶಾಸಕ ಎಂ.ಬಿ.ಪಾಟೀಲ ಪುತ್ರ ಬಸನಗೌಡ ಪಾಟೀಲ ಹೇಳಿದರು.</p>.<p>ಬಬಲೇಶ್ವರ ತಾಲ್ಲೂಕಿನ ಜೈನಾಪುರ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ ‘ಕೋಟಿ ವೃಕ್ಷ ಅಭಿಯಾನ ಯೋಜನೆ’ ಅಡಿ ಸಸಿ ನೆಡುವುದು ಹಾಗೂ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ದೇಶದಲ್ಲಿಯೇ ಮಾದರಿ ರಾಜ್ಯ ಎನ್ನಿಸಿಕೊಂಡಿರುವ ಕರ್ನಾಟಕದಲ್ಲಿ 13 ಲಕ್ಷ ಎಕರೆ ಪ್ರದೇಶಕ್ಕೆ ಹನಿ ನೀರಾವರಿ ಕಲ್ಪಿಸುವ ಯೋಜನೆ ಜಾರಿಯಲ್ಲಿದೆ. ಕೆಲವೆಡೆ ಈ ಯೋಜನೆ ಮುಗಿದಿದ್ದು, ಇನ್ನೂ ಕೆಲವೆಡೆ ಪ್ರಗತಿಯಲ್ಲಿದೆ. ಜಲಸಂಪನ್ಮೂಲ ಇಲಾಖೆಯಿಂದ ರಾಜ್ಯದ 3,500 ಕೆರೆ ಹಾಗೂ ಜಿಲ್ಲೆಯ 200 ಕೆರೆ ಹಾಗೂ ಹಳ್ಳಗಳನ್ನು ತುಂಬಿಸುವ ಕಾರ್ಯ ಜಾರಿಯಲ್ಲಿದೆ’ ಎಂದು ತಿಳಿಸಿದರು.</p>.<p>‘ನೀರಾವರಿ ಯೋಜನೆ ನಂತರ ಪರಿಸರವನ್ನು ರಕ್ಷಿಸಿ, ಬೆಳೆಸಲು ಈ ಕೋಟಿ ವೃಕ್ಷ ಅಭಿಯಾನ ಯೋಜನೆ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 85 ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ವರ್ಷ 15 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ ಮೇಟಿ, ಆನಂದ ಬೋವಿ, ಸಿಆರ್ಪಿ ಸಂತೋಷ ಬೆಳ್ಳುಬ್ಬಿ, ಮುಖ್ಯಶಿಕ್ಷಕ ಬಿ.ಆರ್.ದಳವಾಯಿ, ಬಾಬಾಜಿ ದೇಸಾಯಿ, ಜಗನ್ನಾಥ ದೇಸಾಯಿ, ಹಣಮಂತ ಮುದಕರೆಡ್ಡಿ, ಭೀಮಶಿ ನಾಗರಾಳ, ಜಿ.ಐ.ಗೋಡ್ಯಾಳ, ಎಂ.ವಿ.ಪಾಟೀಲ ಇದ್ದರು.</p>.<p>ವಿ.ಎಸ್.ನಿಂಗರೆಡ್ಡಿ ಸ್ವಾಗತಿಸಿ, ಎ.ಡಿ.ಸಾಹುಕಾರ ನಿರೂಪಿಸಿದರು. ಎಚ್.ಎಂ.ಚಿತ್ತರಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಕೋಟಾ:</strong> ‘ಎಲ್ಲ ಶಾಲೆಗಳ ಆವರಣಗಳಲ್ಲಿ ಸಸಿಗಳನ್ನು ನೆಟ್ಟು, ಬೆಳೆಸಿ, ಹಸಿರು ವನವನ್ನಾಗಿ ಮಾಡಬೇಕು’ ಎಂದು ಶಾಸಕ ಎಂ.ಬಿ.ಪಾಟೀಲ ಪುತ್ರ ಬಸನಗೌಡ ಪಾಟೀಲ ಹೇಳಿದರು.</p>.<p>ಬಬಲೇಶ್ವರ ತಾಲ್ಲೂಕಿನ ಜೈನಾಪುರ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೋಮವಾರ ‘ಕೋಟಿ ವೃಕ್ಷ ಅಭಿಯಾನ ಯೋಜನೆ’ ಅಡಿ ಸಸಿ ನೆಡುವುದು ಹಾಗೂ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ದೇಶದಲ್ಲಿಯೇ ಮಾದರಿ ರಾಜ್ಯ ಎನ್ನಿಸಿಕೊಂಡಿರುವ ಕರ್ನಾಟಕದಲ್ಲಿ 13 ಲಕ್ಷ ಎಕರೆ ಪ್ರದೇಶಕ್ಕೆ ಹನಿ ನೀರಾವರಿ ಕಲ್ಪಿಸುವ ಯೋಜನೆ ಜಾರಿಯಲ್ಲಿದೆ. ಕೆಲವೆಡೆ ಈ ಯೋಜನೆ ಮುಗಿದಿದ್ದು, ಇನ್ನೂ ಕೆಲವೆಡೆ ಪ್ರಗತಿಯಲ್ಲಿದೆ. ಜಲಸಂಪನ್ಮೂಲ ಇಲಾಖೆಯಿಂದ ರಾಜ್ಯದ 3,500 ಕೆರೆ ಹಾಗೂ ಜಿಲ್ಲೆಯ 200 ಕೆರೆ ಹಾಗೂ ಹಳ್ಳಗಳನ್ನು ತುಂಬಿಸುವ ಕಾರ್ಯ ಜಾರಿಯಲ್ಲಿದೆ’ ಎಂದು ತಿಳಿಸಿದರು.</p>.<p>‘ನೀರಾವರಿ ಯೋಜನೆ ನಂತರ ಪರಿಸರವನ್ನು ರಕ್ಷಿಸಿ, ಬೆಳೆಸಲು ಈ ಕೋಟಿ ವೃಕ್ಷ ಅಭಿಯಾನ ಯೋಜನೆ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 85 ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ವರ್ಷ 15 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ ಮೇಟಿ, ಆನಂದ ಬೋವಿ, ಸಿಆರ್ಪಿ ಸಂತೋಷ ಬೆಳ್ಳುಬ್ಬಿ, ಮುಖ್ಯಶಿಕ್ಷಕ ಬಿ.ಆರ್.ದಳವಾಯಿ, ಬಾಬಾಜಿ ದೇಸಾಯಿ, ಜಗನ್ನಾಥ ದೇಸಾಯಿ, ಹಣಮಂತ ಮುದಕರೆಡ್ಡಿ, ಭೀಮಶಿ ನಾಗರಾಳ, ಜಿ.ಐ.ಗೋಡ್ಯಾಳ, ಎಂ.ವಿ.ಪಾಟೀಲ ಇದ್ದರು.</p>.<p>ವಿ.ಎಸ್.ನಿಂಗರೆಡ್ಡಿ ಸ್ವಾಗತಿಸಿ, ಎ.ಡಿ.ಸಾಹುಕಾರ ನಿರೂಪಿಸಿದರು. ಎಚ್.ಎಂ.ಚಿತ್ತರಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>