ಸಿಪಿಎಂ ಕೇರಳ ರಾಜ್ಯ ಮಂಡಳಿ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್, ಸಂಸದ ಕರುಣಾಕರನ್, ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎನ್.ಎ. ಬೇಬಿ ಸೇರಿದಂತೆ ಹಲವು ಮುಖಂಡರು ತಂಡದಲ್ಲಿದ್ದರು. ಸಿಪಿಎಂ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ), ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.