ನಗರದಲ್ಲಿ ಗುರುವಾರ ನಡೆದ ಹಿಂದೂ ಮಹಾ ಮಂಡಳಿಯ ಗಣಪತಿ ಮೂರ್ತಿ ವಿಸರ್ಜನೆಯ ಬಂದೋಬಸ್ತ್ಗೆ ಬಂದಿದ್ದ ಪೊಲೀಸರಿಗೆ ಆರ್ಎಂಎಲ್ ನಗರದ ಸಮೀಪವಿರುವ ಕಲ್ಯಾಣ ಮಂದಿರದಲ್ಲಿ ವಾಸ್ತವ್ಯಕ್ಕೆ ಏರ್ಪಾಡು ಮಾಡಲಾಗಿತ್ತು. ಗಾಢ ನಿದ್ರೆಯಲ್ಲಿದ್ದಾಗ ಮೊಬೈಲ್ ಹಾಗೂ ನಗದನ್ನುಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.