ಆದರೆ ಆನಂದ್ ಸಿಂಗ್ ಪೊಲೀಸರಿಗೆ ತಮ್ಮ ಮೇಲೆ ಕೊಲೆ ಯತ್ನ ನಡೆದಿರುವುದಾಗಿ ಹೇಳಿಕೆ ನೀಡಿದ್ದರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆನಂದ್ ಕುಟಂಬದವರು ಒತ್ತಾಯಿಸಿದ್ದರು. ನಂತರವಷ್ಟೇ ಕಾಂಗ್ರೆಸ್ ಕ್ರಮಕ್ಕೆ ಮುಂದಾಗಿದ್ದು, ಪಕ್ಷಕ್ಕೆ ಆಗಿರುವ ಮುಜುಗರದಿಂದ ತಪ್ಪಿಸಿಕೊಳ್ಳಲು ಗಣೇಶ್ರನ್ನು ಪಕ್ಷದಿಂದ ಅಮಾನತು ಮಾಡಿದೆ.