ರೈತ ಸಂಘದ ಸಂಸ್ಥಾಪಕರು, ಧೀಮಂತ ಹೋರಾಟಗಾರರು ಆಗಿದ್ದ ಸುಂದರೇಶ್ ಅರವರ ವಿಚಾರ ಮತ್ತು ಅವರ ಹೋರಾಟ ಇಂದಿನ ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಅದಕ್ಕಾಗಿ ಎನ್.ಡಿ. ಸುಂದರೇಶ್ ಪ್ರತಿಷ್ಠಾನ, ರೆಡ್ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷತೆ ಶೋಭಾ ಸುಂದರೇಶ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.