ಎರಡೂ ಪಕ್ಷಗಳ ಮುಖಂಡರು ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಅಭ್ಯರ್ಥಿ ಮಧು ಬಂಗಾರಪ್ಪ ಎರಡು ಸುತ್ತು ಪೂರೈಸಿದ್ದಾರೆ. ವ್ಯವಸ್ಥಿತ, ಸಂಘಟನಾತ್ಮಕ ತಂತ್ರಗಾರಿಕೆ ರೂಪಿಸಿಕೊಂಡು ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಕ್ಷೇತ್ರದ ಜವಾಬ್ದಾರಿ ವಹಿಸಿಕೊಂಡಿರುವ ಸಚಿವ ಡಿ.ಕೆ.ಶಿವಕುಮಾರ್ ಈಗಾಗಲೇ ಮುಖಂಡರ ನಡುವೆ ಇದ್ದ ಸಣ್ಣಪುಟ್ಟ ವೈಮನಸ್ಸು ಸರಿಪಡಿಸಿದ್ದಾರೆ. ಹೆಚ್ಚಿನ ಮತಗಳ ಅಂತರದಿಂದ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಹಲವು ಸೂಚನೆ ನೀಡಿದ್ದಾರೆ. ಏ.18ರಿಂದ 22ರವರೆಗೆ ಜಿಲ್ಲೆಯಲ್ಲೇ ಇದ್ದು ಮತ್ತಷ್ಟು ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.