ಸಚಿವರಾದ ಡಿ.ಕೆ.ಶಿವಕುಮಾರ್, ಡಿ.ಸಿ.ತಮ್ಮಣ್ಣ, ಪುಟ್ಟರಾಜು, ಸಾ.ರಾ.ಮಹೇಶ್, ಮುಖಂಡರಾದ ಧ್ರುವನಾರಾಯಣ್, ಡಿ.ಕೆ.ಸುರೇಶ್, ಭೈರತಿ ಸುರೇಶ್, ಡಾ.ರಂಗನಾಥ್, ತನ್ವೀರ್ ಸೇಟ್, ಎ.ಮಂಜುನಾಥ್ ಗುರುವಾರ ಸಂಜೆಯ ನಂತರ ಜಿಲ್ಲೆಗೆ ಬಂದಿದ್ದಾರೆ. ಶುಕ್ರವಾರ ಕ್ಷೇತ್ರದ ಹಲವೆಡೆ ಪ್ರಚಾರ ಕೈಗೊಳ್ಳಲ್ಲಿದ್ದಾರೆ ಎಂದು ಜೆಡಿಎಸ್, ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ, ಎಚ್.ಎಸ್. ಸುಂದರೇಶ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.