<p><strong>ಶಿವಮೊಗ್ಗ: </strong>ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಮುಳುಗಡೆ ಸಂತ್ರಸ್ತರ ಮೇಲೂ ಅರಣ್ಯ ಇಲಾಖೆ ಭೂ ಕಬಳಿಕೆ ಪ್ರಕರಣ ದಾಖಲಿಸುತ್ತಿದೆ. ಇದು ಅಮಾನವೀಯ ಎಂದು ಸಾಗರದ ರೈತ ಹೋರಾಟ ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶರಾವತಿ ಮುಳುಗಡೆ ಪ್ರದೇಶದ ರೈತರು ಬದುಕು ಕಟ್ಟಿಕೊಳ್ಳಲು ಅರಣ್ಯ ಭೂಮಿಯಲ್ಲಿ ನೆಲೆಸಿದ್ದಾರೆ. ಅವರ ಮೇಲೆ ಈಗಾಗಲೇ ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ವಿಶೇಷ ಭೂ ನ್ಯಾಯಾಲಯ ಅವರಿಗೆ ಒಂದು ವರ್ಷ ಶಿಕ್ಷೆ, ₨ 10 ಸಾವಿರ ದಂಡ ವಿಧಿಸಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬೆಂಗಳೂರಿನ ಸುತ್ತಮುತ್ತ ಸರ್ಕಾರಿ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು 2011ರಲ್ಲಿ ಈ ಕಾಯ್ದೆ ಜಾರಿಗೆ ತರಲಾಗಿತ್ತು. ಅಧಿಕಾರಿಗಳು ಈ ಕಾಯ್ದೆ ದುರುಪಯೋಗ ಮಾಡಿಕೊಂಡು ಬಡವರ ಬದುಕು ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಶಿಕ್ಷೆಗೆ ಒಳಗಾದ ಮುಳುಗಡೆ ಸಂತ್ರಸ್ತ ಕುಟುಂಬದ ಗಣಪತಿ, ವಾಸು, ಶಾಂತಮ್ಮ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಕೋರ್ಟ್ ಜಾಮೀನು ನೀಡಿದೆ. ಅಲ್ಲೂ ಶಿಕ್ಷೆ ಎತ್ತಿಹಿಡಿದರೆ ಸುಪ್ರಿಂಕೋರ್ಟ್ ಹೋಗಲು ಈ ಬಡವರಿಗೆ ಸಾಧ್ಯವೇ ಎಂದು ಪ್ರಶ್ನಿಸಿದರು.</p>.<p>ರಾಜ್ಯ ಸರ್ಕಾರ ಸಾಗುವಳಿದಾರ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು ಎಂದು ಮೌಖಿಕವಾಗಿ ಹೇಳಿದ್ದರೂ, ಅಧಿಕಾರಿಗಳು ಆದೇಶ ಪಾಲಿಸುತ್ತಿಲ್ಲ. ತಕ್ಷಣ ಸರ್ಕಾರ ಭೂಕಬಳಿಕೆ ನಿಷೇಧ ಕಾಯಗೆ ತಿದ್ದುಪಡಿ ತರಬೇಕು. ಸಣ್ಣ ರೈತರನ್ನು ಈ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಬೇಕು. ಶಿಕ್ಷೆಗೆ ಒಳಗಾಗಿರುವ ರೈತರನ್ನು ಬಿಡುಗಡೆ ಮಾಡಬೇಕು. 200ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್ ಹಿಂಪಡೆಯಬೇಕು. 20 ವರ್ಷಗಳಿಗೂ ಹೆಚ್ಚು ಅವಧಿ ಸ್ವಾಧೀನದಲ್ಲಿರುವ ರೈತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗಣಪತಿಭಟ್, ಮಂಜುನಾಥ್, ಶಶಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಮುಳುಗಡೆ ಸಂತ್ರಸ್ತರ ಮೇಲೂ ಅರಣ್ಯ ಇಲಾಖೆ ಭೂ ಕಬಳಿಕೆ ಪ್ರಕರಣ ದಾಖಲಿಸುತ್ತಿದೆ. ಇದು ಅಮಾನವೀಯ ಎಂದು ಸಾಗರದ ರೈತ ಹೋರಾಟ ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶರಾವತಿ ಮುಳುಗಡೆ ಪ್ರದೇಶದ ರೈತರು ಬದುಕು ಕಟ್ಟಿಕೊಳ್ಳಲು ಅರಣ್ಯ ಭೂಮಿಯಲ್ಲಿ ನೆಲೆಸಿದ್ದಾರೆ. ಅವರ ಮೇಲೆ ಈಗಾಗಲೇ ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ವಿಶೇಷ ಭೂ ನ್ಯಾಯಾಲಯ ಅವರಿಗೆ ಒಂದು ವರ್ಷ ಶಿಕ್ಷೆ, ₨ 10 ಸಾವಿರ ದಂಡ ವಿಧಿಸಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬೆಂಗಳೂರಿನ ಸುತ್ತಮುತ್ತ ಸರ್ಕಾರಿ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು 2011ರಲ್ಲಿ ಈ ಕಾಯ್ದೆ ಜಾರಿಗೆ ತರಲಾಗಿತ್ತು. ಅಧಿಕಾರಿಗಳು ಈ ಕಾಯ್ದೆ ದುರುಪಯೋಗ ಮಾಡಿಕೊಂಡು ಬಡವರ ಬದುಕು ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಶಿಕ್ಷೆಗೆ ಒಳಗಾದ ಮುಳುಗಡೆ ಸಂತ್ರಸ್ತ ಕುಟುಂಬದ ಗಣಪತಿ, ವಾಸು, ಶಾಂತಮ್ಮ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಕೋರ್ಟ್ ಜಾಮೀನು ನೀಡಿದೆ. ಅಲ್ಲೂ ಶಿಕ್ಷೆ ಎತ್ತಿಹಿಡಿದರೆ ಸುಪ್ರಿಂಕೋರ್ಟ್ ಹೋಗಲು ಈ ಬಡವರಿಗೆ ಸಾಧ್ಯವೇ ಎಂದು ಪ್ರಶ್ನಿಸಿದರು.</p>.<p>ರಾಜ್ಯ ಸರ್ಕಾರ ಸಾಗುವಳಿದಾರ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು ಎಂದು ಮೌಖಿಕವಾಗಿ ಹೇಳಿದ್ದರೂ, ಅಧಿಕಾರಿಗಳು ಆದೇಶ ಪಾಲಿಸುತ್ತಿಲ್ಲ. ತಕ್ಷಣ ಸರ್ಕಾರ ಭೂಕಬಳಿಕೆ ನಿಷೇಧ ಕಾಯಗೆ ತಿದ್ದುಪಡಿ ತರಬೇಕು. ಸಣ್ಣ ರೈತರನ್ನು ಈ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಬೇಕು. ಶಿಕ್ಷೆಗೆ ಒಳಗಾಗಿರುವ ರೈತರನ್ನು ಬಿಡುಗಡೆ ಮಾಡಬೇಕು. 200ಕ್ಕೂ ಹೆಚ್ಚು ರೈತರಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್ ಹಿಂಪಡೆಯಬೇಕು. 20 ವರ್ಷಗಳಿಗೂ ಹೆಚ್ಚು ಅವಧಿ ಸ್ವಾಧೀನದಲ್ಲಿರುವ ರೈತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗಣಪತಿಭಟ್, ಮಂಜುನಾಥ್, ಶಶಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>