ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳವಾರ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ

Last Updated 22 ಜುಲೈ 2019, 10:09 IST
ಅಕ್ಷರ ಗಾತ್ರ

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಜುಲೈ 23ರಂದು ಸಂಜೆ 6ಕ್ಕೆ ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿಶುನಾಳ ಶರೀಫರ 200ನೇ ಜನ್ಮದಿನದ ಅಂಗವಾಗಿ ಸಾಮಾಜಿಕ ಸೇವಾ ಸಂಸ್ಥೆ ’ಅರಿವು’ ಈ ಕಾರ್ಯಕ್ರಮ ಆಯೋಜಿಸಿದೆ. ಹೆಸರಾಂತ ಗಾಯಕ, ಗಾಯಕಿಯರು ಆಯ್ದ ಗೀತೆಗಳನ್ನು ಹಾಡಲಿದ್ದಾರೆ ಎಂದು ಅರಿವು ಸಂಸ್ಥೆಯ ಅಧ್ಯಕ್ಷ ಎಸ್.ಎಲ್.ಲಕ್ಷ್ಮೀಕಾಂತ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶಿಶುನಾಳ ಶರೀಫರ ತತ್ವ ಪದಗಳು ಇಂದಿಗೂ ಗಾಯನದ ಮೂಲಕ ಪ್ರಚಲಿತದಲ್ಲಿವೆ. ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಅಧಿಕಾರಿ ಡಾ.ಮಹೇಶ್ ಜೋಶಿ ಉದ್ಘಾಟಿಸುವರು. ಈ ಸಮಯದಲ್ಲಿ ಜೋಶಿ ಅವರನ್ನು ಸನ್ಮಾನಿಸಲಾಗುವುದು. ಸಂಸ್ಥೆಯ ಗೌರವಾಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾ ಕಸಾಪ ಕಾರ್ಯದರ್ಶಿ ಎಂ.ಎನ್.ಸುಂದರ್‌ರಾಜ್‌ ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಬಿ.ಅಶೋಕ್‌ಕುಮಾರ್, ಚಂದ್ರಶೇಖರಪ್ಪ, ಪ್ರಕಾಶ್, ನಾಗರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT