ಲಿಂಗಾಯತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೋರ್ಣೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಬಹುಜನ ಕ್ರಾಂತಿ ಮೋರ್ಚಾ ರಾಷ್ಟ್ರೀಯ ಸಂಯೋಜಕ ವಿಲಾಸ್ ಕಾರತ್, ರಾಜ್ಯ ಘಟಕದ ಅಧ್ಯಕ್ಷ ಡಾ.ಭಾನುಪ್ರಕಾಶ್, ಮುಖಂಡರಾದ ಸುಭಾಷ್ ನಾಟಿಕರ್, ಕೋಮು ಸೌಹಾರ್ದ ವೇದಿಕೆ ಮುಖಂಡ ಕೆ.ಪಿ. ಶ್ರೀಪಾಲ್, ಮೌಲಾನ್ ಇಮ್ರಾನ್, ರಫೀವುಲ್ಲಾ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಅಂಬೇಡ್ಕರ್ ಸಂಘದ ನಾಗರಾಜ್, ಟ್ರೇಡ್ ಯೂನಿಯನ್ನ ಉಬೇದುಲ್ಲಾ ಭಾಗವಹಿಸುವರು ಎಂದು ವಿವರ ನೀಡಿದರು.