ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ಸಂಘಟನೆ: ನಾಳೆ ಕ್ರಾಂತಿ ಚಳವಳಿ

Last Updated 23 ಅಕ್ಟೋಬರ್ 2019, 11:35 IST
ಅಕ್ಷರ ಗಾತ್ರ

ಶಿವಮೊಗ್ಗ: ಜನ ಪ್ರತಿನಿಧಿಗಳ ಸುಳ್ಳು ಭರವಸೆ, ಭ್ರಷ್ಟಾಚಾರ ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಅ.25ರಂದು ಬೆಳಿಗ್ಗೆ 11ಕ್ಕೆ ಕ್ರಾಂತಿ ಚಳವಳಿ ಹಮ್ಮಿಕೊಂಡಿದೆ ಎಂದು ಸಂಘಟನೆಯ ಅಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ಹೇಳಿದರು.

ಇಂದಿನ ರಾಜಕಾರಣಿಗಳಿಗೆ ಅಭಿವೃದ್ಧಿಯ ಅರಿವಿಲ್ಲ. ಅಧಿಕಾರಿಗಳೂ ರಾಜಕಾರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಭರವಸೆ ನೀಡುತ್ತಿದ್ದಾರೆ. ವಾಸ್ತವದಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ. ಎಲ್ಲಿ ನೋಡಿದರೂ ರಸ್ತೆಗಳು ಗುಂಡಿ ಬಿದ್ದಿವೆ. ರಾಜಕಾರಣಿಗಳು ವಿದ್ಯಾರ್ಥಿಗಳಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ರಾಜಕಾರಣಿಗಳ ನಡೆ ಖಂಡಿಸಿ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಶಿವಕುಮಾರ್ ಗೌಡ, ಚಂದ್ರಶೇಖರ್, ರಾಜೇಶ್, ಲಂಕೇಶ್, ಹನುಮಂತ, ದಿನೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT