ಅಂದು ವಿಚಾರ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಪುಸ್ತಕ ಬಿಡುಗಡೆ, ಸಂಘದ ವೀಡಿಯೊಪ್ರದರ್ಶನ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಗಮಕಿ ಎಚ್.ಆರ್.ಕೇಶವಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಉಪಸ್ಥಿತರಿರುವರು. ಕಲಾವಿದ ಎಚ್.ಕೆ.ವೆಂಕಟರಾಮು ಬಹುಮಾನ ವಿತರಿಸುವರು. ಸಂಘದ ಅಧ್ಯಕ್ಷ ಎಂ.ಎನ್.ಅನಂತ್ ಅಧ್ಯಕ್ಷತೆ ವಹಿಸುವರುಎಂದು ವಿವರ ನೀಡಿದರು.