ಶಿವಮೊಗ್ಗ ತಾಲ್ಲೂಕು ಕಸಬಾ ಹೋಬಳಿಗೆ ಒಳಪಡುವ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿರುವ ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿ ಹಳ್ಳಿಗಳಲ್ಲಿಯಾವುದೇ ಮೂಲ ಸೌಕರ್ಯ ಇಲ್ಲ. ಪುನರ್ ವಸತಿಗಾಗಿದಶಕಗಳಿಂದ ಒತ್ತಾಯಿಸುತ್ತಿದ್ದೇವೆ. ಒತ್ತಾಯದ ಕೂಗು ಯಾರಿಗೂ ಕೇಳಿಸುತ್ತಿಲ್ಲ. ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದೇವೆ ಎಂದುಗ್ರಾಮದ ಮುಖಂಡರಾದಸದಸ್ಯ ಸಿ.ರಾಜಪ್ಪ, ಎಂ.ಜೆ.ರಾಜಪ್ಪ, ಎಸ್.ಜೆ.ಮಂಜಪ್ಪ, ಎಸ್.ಜಿ.ಚಟ್ಟಪ್ಪ, ಅರ್ಜುನ್, ತಿಮ್ಮಪ್ಪ, ಪ್ರದೀಪ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.