ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣಗೆ ನಾಳೆ ಸನ್ಮಾನ

Last Updated 11 ಫೆಬ್ರುವರಿ 2020, 11:22 IST
ಅಕ್ಷರ ಗಾತ್ರ

ಶಿವಮೊಗ್ಗ:ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಫೆ.13ರಂದು ಸಂಜೆ 5.30ಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.

ಅಶ್ವತ್ಥನಾರಾಯಣ ಅವರು ಶಿವಮೊಗ್ಗದಲ್ಲಿ 8ರಿಂದ ಪಿಯುವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ.ಆಗ ಅವರ ತಂದೆ ನಾರಾಯಪ್ಪ ಅವರು ಡಿಡಿಪಿಐ ಕಚೇರಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿಯಾಗಿನಗರಕ್ಕೆಬರುತ್ತಿದ್ದಾರೆ. ಅವರಸಹಪಾಠಿಗಳು, ಅಭಿಮಾನಿಗಳು ಸೇರಿ ಅಭಿನಂದಿಸಲಿದ್ದಾರೆ ಎಂದು ಒಕ್ಕೂಟದ ಮುಖಂಡ ಡಿ.ಮಂಜುನಾಥ್ಮಂಗಳವಾರಪತ್ರಿಕಾಗೋಷ್ಠಿಯಲ್ಲಿಮಾಹಿತಿ ನೀಡಿದರು.

ಪ್ರಸನ್ನನಾಥ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ, ಎಂ.ಜೆ.ಅಪ್ಪಾಜಿಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮೇಯರ್ ಸುವರ್ಣಾ ಶಂಕರ್, ಅಡಿಕೆ ವರ್ತಕ ಕಿಮ್ಮನೆ ಜಿ.ಜಯರಾಮ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಡಿ.ವಿ.ರಮೇಶ್, ಎಪಿಎಂಸಿ ಅಧ್ಯಕ್ಷ ಕೆ.ಪಿ. ದುಗ್ಗಪ್ಪಗೌಡ, ಪಾಲಿಕೆ ವಿರೋಧ ಪಕ್ಷದ ನಾಯಕ ಬಿ.ಎ. ರಮೇಶ್ ಹೆಗಡೆ ಉಪಸ್ಥಿತರಿರುವರು.ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ಅಧ್ಯಕ್ಷತೆ ವಹಿಸುವರುಎಂದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಬಿ.ಎಂ.ಸುಂದರೇಶ್, ಹರ್ಷಿತ್,ಎಸ್.ದೇವಾನಂದ, ಎಚ್.ಎಸ್.ವೆಂಕಟೇಶ್, ಶಿವರಾಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT