ಲೋಕೋಪಯೋಗಿ ಇಲಾಖೆಗೆ ರಾಜ್ಯದಲ್ಲಿ ಪ್ರಸ್ತುತ ದಕ್ಷಿಣ, ಉತ್ತರ,ಎರಡುಮುಖ್ಯ ಇಂಜಿನಿಯರ್ ಅವರಕೇಂದ್ರ ಕಚೇರಿ ಇದೆ.ಸಂಘದ ಮನವಿ ಮೇರೆಗೆ ಶಿವಮೊಗ್ಗ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಲೋಕೋಪಯೋಗಿ ಇಲಾಖೆಯ ಕೇಂದ್ರ ವಲಯದ ಮುಖ್ಯ ಎಂಜಿನಿಯರ್ ಕಚೇರಿ ಆರಂಭಿಸಲು ತಾತ್ವಿಕ ಒಪ್ಪಿಗೆ ದೊರೆತಿದೆ. ಸಂಘದ ಮನವಿಗೆ ಸ್ಪಂದಿಸಿ 300 ವಸತಿ ಗೃಹಗಳ ನಿರ್ಮಾಣಕ್ಕೆ₹ 40 ಕೋಟಿ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಈ ಎಲ್ಲ ಬೇಡಿಕೆ ಯಡಿಯೂರಪ್ಪ ಅವರು ಈಡೇರಿಸಲುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸಹಕರಿಸಿದ್ದಾರೆಎಂದುಧನ್ಯವಾದ ಸಲ್ಲಿಸಿದರು.