2006ರ ಅರಣ್ಯ ಹಕ್ಕು ಕಾಯ್ದೆ ಅಡಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲ ಬುಡಕಟ್ಟು ಜನರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು. ಅಂತಹ ಭೂಮಿಗೆ ಕೃಷಿ ಅಭಿವೃದ್ಧಿ ಬ್ಯಾಂಕ್ ಸಾಲ, ಸರ್ಕಾರದ ಸೌಲಭ್ಯ ಒದಗಿಸಬೇಕು. ಮನೆ ಕಟ್ಟಲು ನಿವೇಶನವೂ ಇಲ್ಲದೆ, ಮನೆಯೂ ಇಲ್ಲದೆ ಜೀತದ ಜೀವನ ಸಾಗಿಸುವಂತಹ ಪರಿಸ್ಥಿತಿ ಆದಿವಾಸಿಗಳು ಅನುಭವಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.