ಮಹದಾಯಿ-, ಕಳಸ–ಬಂಡೂರಿ ಯೋಜನೆ ಅನುಷ್ಠಾನಗೊಳ್ಳಬೇಕು. ನ್ಯಾಯಾಧೀಕರಣದ ಆದೇಶದಂತೆ 4 ಟಿಎಂಸಿ ನೀರು ಮಲಪ್ರಭೆಗೆ ಹರಿಸಬೇಕು. ಉದ್ಯೋಗ ಖಾತ್ರಿ ಯೋಜನೆಗೆ ಮತ್ತಷ್ಟು ವಿಸ್ತರಿಸಬೇಕು. ನವಲಗುಂದ, ನರಗುಂದ, ಕುಂದಗೋಳ, ಹುಬ್ಬಳ್ಳಿ, ಧಾರವಾಡ ಮತ್ತಿತರ ಪಟ್ಟಣ ಪ್ರದೇಶಗಳ ಕೃಷಿ ಕಾರ್ಮಿಕರನ್ನೂ ಈ ಯೋಜನೆ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದರು.