ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್ ಪಲ್ಟಿ: ಮೂವರ ಸಾವು

Last Updated 19 ಏಪ್ರಿಲ್ 2019, 4:59 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಉಳ್ಳೂರು ಗ್ರಾಮದ ಸಮೀಪ ಬುಧವಾರ ತಡರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಒಂದೇ ಕುಟುಂಬದ ಇಬ್ಬರು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸೀಬರ್ಡ್ ಬಸ್ ಪಲ್ಟಿಯಾದ ಕಾರಣ ಹೊನ್ನಾವರ ಸಮೀಪದ ಕರ್ಕಿ ಗ್ರಾಮದ ಸುಜಾತಾ (40) ಅವರ ಪುತ್ರಿ ಕೀರ್ತನಾ (12), ಹಿರಿಯೂರು ತಾಲ್ಲೂಕಿನ ಪಾಲ್ವನಹಳ್ಳಿ ಗ್ರಾಮದ ಮಹ್ಮದ್ ಯಾಸೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡವರಿಗೆ ಇಲ್ಲಿನ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT