ಗುತ್ತಿಗೆದಾರರು ಹಾಗೂ ಕೊಳಚೆ ನಿರ್ಮೂಲನ ಮಂಡಳಿ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಾರೆ. ನಿಗದಿತ ಅವಧಿ ಒಳಗೆ ಪೂರ್ಣಗೊಳಿಸುತ್ತಿಲ್ಲ. ನಿಧಾನಗತಿ ಕಾಮಗಾರಿ ಪರಿಣಾಮ ಬಾಡಿಗೆ ಮನೆಯಲ್ಲಿ ಇರುವ ಬಡವರಿಗೆ ತೊಂದರೆಯಾಗಿದೆ ಎಂದು ದೂರಿದರು.
ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಮುಖಂಡರಾದ ರುದ್ರಪ್ಪ, ಗೌರಮ್ಮ, ಸರೋಜಮ್ಮ, ಶಕುಂತಲಾ, ಪ್ರಕಾಶ್, ಮುನೀರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು