ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಲಿಪುರ: ದುರ್ಬಲ ವರ್ಗಕ್ಕೆ ನಿವೇಶನ ನೀಡಲು ಆಗ್ರಹ

Last Updated 14 ಜನವರಿ 2019, 12:03 IST
ಅಕ್ಷರ ಗಾತ್ರ

ಶಿವಮೊಗ್ಗ: ಸಿದ್ಲಿಪುರ ಗ್ರಾಮದ ಸರ್ವೆ ನಂಬರ್ 26ರಲ್ಲಿ ಆದಿವಾಸಿ ಬುಡಕಟ್ಟು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಹಕ್ಕುಪತ್ರ, ನಿವೇಶನ ನೀಡಲು ಆಗ್ರಹಿಸಿ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

2013–14ನೇ ಸಾಲಿನಲ್ಲೇ ಸರ್ವೆ ನಕಾಶೆ ತಯಾರಿಸಿ ತಾಲ್ಲೂಕು ಕಚೇರಿ ಸಲ್ಲಿಸಲಾಗಿದೆ. ಕೂಡಲೇ ಅಲ್ಲಿ ನಿವೇಶನ ನಿರ್ಮಿಸಬೇಕು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಮುದ್ದಿನ ಕೊಪ್ಪ ಗ್ರಾಮದ ಸರ್ವೆ ನಂಬರ್ 143/74 ರಲ್ಲಿ ಬಗರ್ ಉಕುಂ ಸಾಗುವಳಿ ಮಾಡಿರುವ ವಿಧವಾ ಮಹಿಳೆಯರಿಗೆ ತಲಾ ಎರಡು ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಮತ್ತಿತರರು ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT