ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತಪತ್ರಗಳನ್ನೇ ಬಳಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜವಾದಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಇವಿಎಂ ಬಳಕೆ ಕುರಿತು ಹಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಆಧನಿಕ ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯೂ ಇದೆ. ಇವಿಎಂ ಯಂತ್ರಗಳನ್ನೇ ಹ್ಯಾಕ್ ಮಾಡುವ ತಂತ್ರಜ್ಞಾನ ಬಂದಿದೆ. ಹಲವು ದೇಶಗಳಲ್ಲಿ ಈ ರೀತಿ ಹ್ಯಾಕ್ ಮಾಡಲಾಗಿದೆ. ಹಾಗಾಗಿ, ಮತಯಂತ್ರಗಳನ್ನೇ ಬಳಸಬೇಕು ಎಂದು ಒತ್ತಾಯಿಸಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನುಮಾನ ಮೂಡಿಸಿದೆ ಎಂದರು.