ಬ್ರಿಟಿಷ್ ಸರ್ಕಾರ ರೂಪಿಸಿದ್ದ ಭೂ ಸ್ವಾಧೀನ ಕಾಯ್ದೆಯನ್ನು ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ರದ್ದುಪಡಿಸಿ, ಹೊಸ ಕಾಯ್ದೆ ಜಾರಿಗೆ ತಂದಿತ್ತು. ಕೇಂದ್ರ ಅಥವಾ ರಾಜ್ಯ ಸರ್ಕಾರ ಯಾವುದೇ ಉದ್ದೇಶಕ್ಕೆ ಖಾಸಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೊದಲು ಸಂತ್ರಸ್ತರ ಸಮ್ಮತಿ ಪಡೆಯಬೇಕು. ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪುನರ್ವಸತಿ, ಪುನರ್ ವ್ಯವಸ್ಥೆ ಮತ್ತು ಪರಿಹಾರ ನಿಗದಿ ಮಾಡಬೇಕು ಎಂದು ನಮೂದಿಸಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಎನ್ಡಿಎ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತರಲು ಪ್ರಯತ್ನಿಸಿ ಮುಖಭಂಗ ಅನುಭವಿಸಿತ್ತು ಎಂದು ದೂರಿದರು.