<p><strong>ಶಿವಮೊಗ್ಗ: </strong>ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಂಗಳವಾರ ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿ, ಪ್ರತ್ಯೇಕ ಪ್ರತಿಭಟನೆ ನಡೆಸಿದರು.</p>.<p><strong>ಕಾಂಗ್ರೆಸ್ ಪ್ರತಿಭಟನೆ:</strong></p>.<p>ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಆ ಪಕ್ಷದ ಮುಖಂಡರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿ ಕಾರಣ. ಪಕ್ಷದ ಮುಖಂಡರ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವ ವ್ಯವಸ್ಥೆಯೇ ದಾರಿತಪ್ಪುತ್ತಿದೆ. ಇದು ಅಸಂವಿಧಾನಿಕ ಕ್ರಿಯೆ. ಬಿಜೆಪಿಯ ಕುತಂತ್ರ ರಾಜಕಾರಣ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೈತ್ರಿ ಸರ್ಕಾರ ಉರುಳಿಸುವ, ಅಧಿಕಾರದ ದಾಹಕ್ಕಾಗಿ ಹಪಹಪಿಸುವ ಬಿಜೆಪಿ ನೇರನೇರಾ ಯುದ್ಧ ಮಾಡದೆ ಹಿಂಬಾಗಿಲಿನಿಂದ ಪ್ರವೇಶ ಪಡೆಯಲು ಪ್ರಯತ್ನಿಸುತ್ತಿದೆ. ಇಂತಹ ಮನೆಮುರುಕ ಕೆಲಸ ಕೈ ಬಿಡಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮುಖಂಡರ ವಿರುದ್ದ ಘೋಷಣೆ ಕೂಗುವ ಜತೆಗೆ, ಪಕ್ಷಕ್ಕೆ ದ್ರೋಹ ಬಗೆದು ರಾಜೀನಾಮೆ ನೀಡಿದ ಶಾಸಕರುಗಳಿಗೆ ದಿಕ್ಕಾರ ಕೂಗಿದರು. ಅವರ ಭಾವಚಿತ್ರಗಳಿಗೆ ಹಾರಹಾಕಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಎನ್.ರಮೇಶ್, ಇಸ್ಮಾಯಿಲ್ ಖಾನ್, ಅನಿತಾ ಕುಮಾರಿ, ವಿಜಯಲಕ್ಷ್ಮಿ ಪಾಟೀಲ್, ಚಂದ್ರಭೂಪಾಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<p><strong>ಬಿಜೆಪಿ ಪ್ರತಿಭಟನೆ:</strong></p>.<p>ಬಹುಮತ ಕಳೆದುಕೊಂಡಿರುವ ಸಮ್ಮಿಶ್ರ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು. ಖುರ್ಚಿ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಮ್ಮಿಶ್ರ ಸರ್ಕಾರ ಸಂಖ್ಯಾಬಲ ಕಳೆದುಕೊಂಡಿದೆ. ಆದರೂ, ಮುಖ್ಯಮಂತ್ರಿ ಕುಮಾರಸ್ವಾಮಿ ಖರ್ಚಿಗೆ ಅಂಟಿಕೊಂಡಿದೆ. ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಮ್ಮಿಶ್ರ ಸರ್ಕಾರ ಜನ ಹಾಗೂ ಶಾಸಕರ ಬೆಂಬಲ ಕಳೆದುಕೊಂಡಿದೆ. ಎರಡೂ ಪಕ್ಷದ ಶಾಸಕರಲ್ಲಿ ಅಸಮಾಧಾನ ಬುಗಿಲೆದ್ದಿದೆ. ಶಾಸಕರೇ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ. ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಇದರಲ್ಲಿ ಬಿಜೆಪಿ ಪಾತ್ರವಿಲ್ಲ ಎಂದರು.</p>.<p>ಒಂದು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿ ರಾಜ್ಯದ ಅಭಿವೃದ್ಧಿಗೆ ಗಮನ ನೀಡಿಲ್ಲ. ಬರ ತಾಂಡವವಾಡುತ್ತಿದ್ದರೂ ದೇವಸ್ಥಾನ ಭೇಟಿ , ರೆಸಾರ್ಟ ರಾಜಕೀಯ, ಮಗನ ಗೆಲುವಿಗೆ ಶತ ಪ್ರಯತ್ನ ಮಾಡಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಯೋಚಿಸುವುದು ಬಿಟ್ಟು ಯಾವುದೇ ಶಾಸಕರ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಗ್ರಾಮ ವಾಸ್ತವ್ಯದ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ, ಮುಖಂಡರಾದ ಡಿ.ಎಸ್.ಅರುಣ್, ಲತಾಗಣೇಶ್, ಅನಿತಾರವಿಶಂಕರ್, ಸುನಿತಾ ಅಣ್ಣಪ್ಪ, ಸುರೇಖಾ ಮುರಳಿಧರ್, ನಾಗರಾಜ್, ಜ್ಯೋತಿಪ್ರಕಾಶ್, ಎನ್.ಜೆ.ರಾಜಶೇಖರ್, ಬಿಳಕಿ ಕೃಷ್ಣಮೂರ್ತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಂಗಳವಾರ ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿ, ಪ್ರತ್ಯೇಕ ಪ್ರತಿಭಟನೆ ನಡೆಸಿದರು.</p>.<p><strong>ಕಾಂಗ್ರೆಸ್ ಪ್ರತಿಭಟನೆ:</strong></p>.<p>ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಆ ಪಕ್ಷದ ಮುಖಂಡರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿ ಕಾರಣ. ಪಕ್ಷದ ಮುಖಂಡರ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವ ವ್ಯವಸ್ಥೆಯೇ ದಾರಿತಪ್ಪುತ್ತಿದೆ. ಇದು ಅಸಂವಿಧಾನಿಕ ಕ್ರಿಯೆ. ಬಿಜೆಪಿಯ ಕುತಂತ್ರ ರಾಜಕಾರಣ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೈತ್ರಿ ಸರ್ಕಾರ ಉರುಳಿಸುವ, ಅಧಿಕಾರದ ದಾಹಕ್ಕಾಗಿ ಹಪಹಪಿಸುವ ಬಿಜೆಪಿ ನೇರನೇರಾ ಯುದ್ಧ ಮಾಡದೆ ಹಿಂಬಾಗಿಲಿನಿಂದ ಪ್ರವೇಶ ಪಡೆಯಲು ಪ್ರಯತ್ನಿಸುತ್ತಿದೆ. ಇಂತಹ ಮನೆಮುರುಕ ಕೆಲಸ ಕೈ ಬಿಡಬೇಕು ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮುಖಂಡರ ವಿರುದ್ದ ಘೋಷಣೆ ಕೂಗುವ ಜತೆಗೆ, ಪಕ್ಷಕ್ಕೆ ದ್ರೋಹ ಬಗೆದು ರಾಜೀನಾಮೆ ನೀಡಿದ ಶಾಸಕರುಗಳಿಗೆ ದಿಕ್ಕಾರ ಕೂಗಿದರು. ಅವರ ಭಾವಚಿತ್ರಗಳಿಗೆ ಹಾರಹಾಕಿ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಎನ್.ರಮೇಶ್, ಇಸ್ಮಾಯಿಲ್ ಖಾನ್, ಅನಿತಾ ಕುಮಾರಿ, ವಿಜಯಲಕ್ಷ್ಮಿ ಪಾಟೀಲ್, ಚಂದ್ರಭೂಪಾಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<p><strong>ಬಿಜೆಪಿ ಪ್ರತಿಭಟನೆ:</strong></p>.<p>ಬಹುಮತ ಕಳೆದುಕೊಂಡಿರುವ ಸಮ್ಮಿಶ್ರ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು. ಖುರ್ಚಿ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಮ್ಮಿಶ್ರ ಸರ್ಕಾರ ಸಂಖ್ಯಾಬಲ ಕಳೆದುಕೊಂಡಿದೆ. ಆದರೂ, ಮುಖ್ಯಮಂತ್ರಿ ಕುಮಾರಸ್ವಾಮಿ ಖರ್ಚಿಗೆ ಅಂಟಿಕೊಂಡಿದೆ. ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಮ್ಮಿಶ್ರ ಸರ್ಕಾರ ಜನ ಹಾಗೂ ಶಾಸಕರ ಬೆಂಬಲ ಕಳೆದುಕೊಂಡಿದೆ. ಎರಡೂ ಪಕ್ಷದ ಶಾಸಕರಲ್ಲಿ ಅಸಮಾಧಾನ ಬುಗಿಲೆದ್ದಿದೆ. ಶಾಸಕರೇ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ. ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಇದರಲ್ಲಿ ಬಿಜೆಪಿ ಪಾತ್ರವಿಲ್ಲ ಎಂದರು.</p>.<p>ಒಂದು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿ ರಾಜ್ಯದ ಅಭಿವೃದ್ಧಿಗೆ ಗಮನ ನೀಡಿಲ್ಲ. ಬರ ತಾಂಡವವಾಡುತ್ತಿದ್ದರೂ ದೇವಸ್ಥಾನ ಭೇಟಿ , ರೆಸಾರ್ಟ ರಾಜಕೀಯ, ಮಗನ ಗೆಲುವಿಗೆ ಶತ ಪ್ರಯತ್ನ ಮಾಡಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಯೋಚಿಸುವುದು ಬಿಟ್ಟು ಯಾವುದೇ ಶಾಸಕರ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಗ್ರಾಮ ವಾಸ್ತವ್ಯದ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ, ಮುಖಂಡರಾದ ಡಿ.ಎಸ್.ಅರುಣ್, ಲತಾಗಣೇಶ್, ಅನಿತಾರವಿಶಂಕರ್, ಸುನಿತಾ ಅಣ್ಣಪ್ಪ, ಸುರೇಖಾ ಮುರಳಿಧರ್, ನಾಗರಾಜ್, ಜ್ಯೋತಿಪ್ರಕಾಶ್, ಎನ್.ಜೆ.ರಾಜಶೇಖರ್, ಬಿಳಕಿ ಕೃಷ್ಣಮೂರ್ತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>