ರಸ್ತೆ ಪಕ್ಕದಲ್ಲೇ ಎರಡು ಸರ್ಕಾರಿ ಶಾಲೆಗಳು, ದೇವಾಲಯಗಳು, ಭದ್ರಾ ‘ಕಾಡಾ’ ಕಚೇರಿ ಇದೆ. ನೀರಿನ ಟ್ಯಾಂಕ್ ಇದೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಕೆ.ಬಿ. ಅಶೋಕ ನಾಯ್ಕ್ , ಮಾಜಿ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅವರು ರಸ್ತೆ ವಿಸ್ತರಣೆ ನಡೆಸದಂತೆ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದರೂ, ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಹೊರವಲಯ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.