ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಲಭ್ಯಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Last Updated 24 ಜುಲೈ 2019, 13:59 IST
ಅಕ್ಷರ ಗಾತ್ರ

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಹ್ಯಾದ್ರಿ ಕಾಲೇಜು 75 ವರ್ಷದ ಇತಿಹಾಸ ಹೊಂದಿದೆ. ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಮೂಲ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ. ಶೌಚಾಲಯ ವ್ಯವಸ್ಥೆ ಇಲ್ಲ. ಹೊಸದಾಗಿ ನಿರ್ಮಿಸಿರುವ ಶೌಚಾಲಯ ಅವೈಜ್ಞಾನಿಕವಾಗಿದೆ. ಅವ್ಯವಸ್ಥೆಯಿಂದ ಕೂಡಿದೆ. ಸ್ವಚ್ಛತೆ ಇಲ್ಲ. ಕ್ಯಾಂಟಿನ್ ವ್ಯವಸ್ಥೆ ಸರಿ ಇಲ್ಲ ಎಂದು ಆರೋಪಿಸಿದರು.

ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ತರಗತಿಗಳು ಆರಂಭವಾಗಿಲ್ಲ. ಪ್ರಯೋಗಾಲಯ ಇಲ್ಲ, ಲೈಬ್ರರಿ ವ್ಯವಸ್ಥೆ ಸರಿ ಇಲ್ಲ, ತಕ್ಷಣವೇ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಎಲ್.ಎನ್.ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT