ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾನಗರದಲ್ಲಿ ನಡೆಯುತ್ತಿತ್ತು. ತುಂಗಾ ಪ್ರವಾಹದಿಂದ ಹಾಸ್ಟೆಲ್ ಕಟ್ಟಡಕ್ಕೆ ನೀರು ನುಗ್ಗಿದ್ದ ಪರಿಣಾಮ ಅಲ್ಲಿನ ವಿದ್ಯಾರ್ಥಿಗಳನ್ನು ನವುಲೆಯ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದರೂ ಅಲ್ಲಿಗೆ ವಾಪಸ್ ಕರೆಸಿಲ್ಲ. ಸಹ್ಯಾದ್ರಿಕಾಲೇಜು ಸೇರಿದಂತೆ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.